ಪತ್ನಿಯೊಂದಿಗೆ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ್ದ ಹ್ಯಾರಿಸ್ 
ರಾಜ್ಯ

ಮಲ್ಯ ಆಸ್ಪತ್ರೆಯಲ್ಲಿ ಸಂಧಾನಕ್ಕೆ ಯತ್ನ: ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಹ್ಯಾರಿಸ್ ದಂಪತಿ ಮನವಿ?

ಪುತ್ರ ನಲಪಾಡ್ ನಿಂದ ಹಲ್ಲೆಗೆ ಒಳಗಾದ ವಿದ್ವತ್ ಅವರನ್ನು ನೋಡಲು ಶಾಂತಿನಗರದ ಶಾಸಕ ಹ್ಯಾರಿಸ್ ದಂಪತಿ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ್ದರು....

ಬೆಂಗಳೂರು: ಪುತ್ರ ನಲಪಾಡ್ ನಿಂದ ಹಲ್ಲೆಗೆ ಒಳಗಾದ ವಿದ್ವತ್ ಅವರನ್ನು ನೋಡಲು ಶಾಂತಿನಗರದ ಶಾಸಕ ಹ್ಯಾರಿಸ್ ದಂಪತಿ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ವಿದ್ವತ್ ತಂದೆಯನ್ನು ಭೇಟಿ ಮಾಡಿದ ಹ್ಯಾರಿಸ್ ತಮ್ಮ ಮಗನ ವಿರುದ್ಧದ ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಪತ್ನಿಯೊಂದಿಗೆ ಆಸ್ಪತ್ರೆಗೆ ಆಗಮಿಸಿದ ಹ್ಯಾರಿಸ್ ತಮ್ಮ ಮಗ ಮಾಡಿದ ತಪ್ಪಿನಿಂದ ಘಟನೆ ನಡೆದ ದಿನದಿಂದ ಪ್ರತಿನಿಂದ ನೋವು ಅನುಭವಿಸುತ್ತಿರುವುದಾಗಿ ಹೇಳಿದ್ದಾರೆ. ವಿದ್ವತ್ ತಂದೆ ಲೋಕನಾಥನ್ ಅವರನ್ನು ಭೇಟಿ ಮಾಡಿದ ಹ್ಯಾರಿಸ್ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸದಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಇನ್ನೂ ರಾಜಿ ಸಂಧಾನ ಯತ್ನ ಕುರಿತು ವಿವಿರಣೆ ಪಡೆಯಲು ಶಾಸಕ ಹ್ಯಾರಿಸ್ ಅವರಿಗೆ ಕರೆ ಮಾಡಲಾಯಿತು. ಆದರೆ ಅವರು ಯಾವುದೇ ಕರೆಗಳಿಗೆ ಪ್ರತಿಕ್ರಿಯೆ ನೀಡಿಲ್ಲ.
ಇನ್ನೂ ವಿದ್ವತ್ ತಂದೆ ಬಳಿ ಮಾತನಾಡಿರುವ ಹ್ಯಾರಿಸ್ ತಮ್ಮ ಮಗ ಮೊಹಮದ್ ನನ್ನ ಕರೆತಂದು ವಿದ್ವತ್ ಬಳಿ ಕ್ಷಮೆ ಕೋರಿಸುವುದಾಗಿ ತಿಳಿಸಿದ್ದಾರೆ, ಆದರೆ ಲೋಕನಾಥನ್ ಇದ್ಯಾವುದಕ್ಕೂ ಮನ್ನಣೆ ನೀಡಲಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 100ಕ್ಕೆ ಏರಿಕೆ, ಹಲವರಿಗೆ ಗಾಯ

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!