ರಾಜ್ಯ

ಕಾರವಾರ: ಫೆ.27ರೊಳಗೆ ಸೀಬರ್ಡ್ ನಿರಾಶ್ರಿತರಿಗೆ ಪರಿಹಾರ ಮೊತ್ತ ಪಾವತಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Raghavendra Adiga
ಕಾರವಾರ: ಕಾರವಾರದ ಸೀಬರ್ಡ್ ನಿರಾಶ್ರಿತರಿಗೆ ನೀಡಬೇಕಿರುವ ಒಟ್ಟು 587 ಕೋಟಿ ರೂ. ಪರಿಹಾರದಲ್ಲಿ 534 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದ್ದು ಉಳಿದ ಪರಿಹಾರ ಮೊತ್ತವನ್ನು  ಫೆ.27ರೊಳಗೆ ಬಿಡುಗಡೆಗೊಳಿಸಲಾಗುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕಾರವಾರದ ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸೀಬರ್ಡ್ ಯೋಜನಾ ನಿರಾಶ್ರಿತರಿಗೆ ಪರಿಹಾರ ವಿತರಣೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ದೆಹಲಿಯಲ್ಲಿ ನರೇಂದ್ರ ಮೋದಿ ಸರ್ಕಾರ ಬಂದ ಬಳಿಕ ಸೀಬರ್ಡ್ ನಿರಾಶ್ರಿತರ ಪರಿಹಾರಕ್ಕಾಗಿ 459 ಕೋಟಿ ರೂ. ನೀಡಲಾಗಿದೆ. ಇದಕ್ಕೂ ಹಿಂದಿನ ಸರ್ಕಾರದ ಅವಧಿಯಲ್ಲಿ 78 ಕೋಟಿ ರೂ. ಮಾತ್ರ ಬಿಡುಗಡೆಗೊಳಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. 
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 96 ನಿರಾಶ್ರಿತರಿಗೆ ಸಚಿವರು ಸಾಂಕೇತಿಕವಾಗಿ ಪರಿಹಾರದ ಚೆಕ್ ಗಳನ್ನು ವಿತರಿಸಿದ್ದಾರೆ
SCROLL FOR NEXT