ರಾಜ್ಯ

ವಿಜಯಪುರ: ವೃಕ್ಷಾಥನ್ 2018ಕ್ಕೆ ರಾಹುಲ್ ಗಾಂಧಿ ಚಾಲನೆ

Nagaraja AB

ವಿಜಯಪುರ: ರಾಜ್ಯದಲ್ಲಿ ಎರಡನೇ ಹಂತದ ಜನಾಶೀರ್ವಾದ ಯಾತ್ರೆ ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿಜಯಪುರದಲ್ಲಿಂದು ವೃಕ್ಷಾಥನ್ ಮ್ಯಾರಾಥಾನ್ 2018ಕ್ಕೆ ಚಾಲನೆ ನೀಡಿದರು.

ರಾಜ್ಯ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ್ ಸೇರಿದಂತೆ  ನೂರಾರು ಸ್ವಯಂ ಸೇವಕರು ಈ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದರು.

ಪರಿಸರ ಸಂರಕ್ಷಣೆ ಹಾಗೂ ಸಸಿ ನೆಡುವುದನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸಮಿತಿ ವತಿಯಿಂದ ಆ ಮ್ಯಾರಾಥಾನ್
ಆಯೋಜಿಸಲಾಗಿತ್ತು.

SCROLL FOR NEXT