ಏಪ್ರಿಲ್ 15ರ ಬಳಿಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಒಪಿ ರಾವತ್ 
ರಾಜ್ಯ

ಏಪ್ರಿಲ್ 15ರ ಬಳಿಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಒಪಿ ರಾವತ್

ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕವನ್ನು ಏಪ್ರಿಲ್ 15ರ ಬಳಿಕ ಪ್ರಕಟಿಸಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್‌ ಹೇಳಿದರು.

ನವದೆಹಲಿ:  ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕವನ್ನು ಏಪ್ರಿಲ್ 15ರ ಬಳಿಕ ಪ್ರಕಟಿಸಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ  ಒ.ಪಿ. ರಾವತ್‌ ಹೇಳಿದರು. ಖಾಸಗಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ರಾವತ್ ಈ ಹೇಳಿಕೆ ನೀಡಿದ್ದಾರೆ.
"ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಮಧ್ಯಭಾಗದೊಳಗೆ ಎಲ್ಲಾ ಶಾಲಾ, ಕಾಲೇಜು ಮಟ್ಟದ ಪರೀಕ್ಷೆಗಳು ಕೊನೆಗೊಳ್ಳಲಿದ್ದು ಆ ಬಳಿಕ ಚುನಾವಣೆಗೆ ದಿನಾಂಕ ನಿಗದಿಪಡಿದಲಾಗುತ್ತದೆ" ರಾವತ್‌ ಹೇಳಿದ್ದಾರೆ.
ಏಪ್ರಿಲ್ ತಿಂಗಳ ಮೊದಲ ವಾರ ಚುನಾವಣಾ ಆಯೋಗದ ಅಧಿಕಾರಿಗಳು ಕರ್ನಾಟಕಕ್ಕೆ ಭೇಟಿ ನೀಡಲಿದ್ದು ಚುನಾವಣಾ ಸಂಬಂಧ ಅಂತಿಮ ಸಿದ್ದತೆಗಳ ಬಗೆಗೆ ಪರಿಶೀಲನೆ ನಡೆಸಲಿದ್ದಾರೆ. ಇದಾದ ಬಳಿಕ ಸೂಕ್ತ ಸಲಹೆಗಳನ್ನು ಪಡೆದು ಎರಡನೇ ವಾರದ ವೇಳೆಗೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಿದ್ದಾರೆ ಎಂದು ಅವರು ತಿಳಿಸಿದರು.
ಪ್ರಸ್ತುತ ವಿಧಾನ ಸಭೆ ಅಧಿಕಾರದ ಅವಧಿಯು ಮೇ 28ಕ್ಕೆ ಅಂತ್ಯಗೊಳ್ಳಲಿದ್ದು ಅಷ್ಟರಲ್ಲಿ ಚುನಾವಣೆ ಮುಗಿದು ಫಲಿತಾಂಶ ಘೋಷಣೆಯಾಗಬೇಕಿದೆ.
ಪ್ರಸ್ತುತ ಕಾಂಗ್ರೆಸ್ ಆಳ್ವಿಕೆಯಲ್ಲಿರುವ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರಲು ಪ್ರಯತ್ನ ನಡೆಸಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಈ ಸಂಬಂಧ ಬಲವಾದ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಇದೇ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಹ ರಾಜ್ಯ ಪ್ರವಾಸ ಕೈಗೊಂಡು ಜನರ ಗಮನ ಸೆಳೆಯುವ ಪ್ರಯತ್ನ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ