ಮೈಸೂರು ಯುವರಾಜನಿಗೆ ಆದ್ಯವೀರ ಒಡೆಯರ್ ಎಂದು ನಾಮಕರಣ 
ರಾಜ್ಯ

ಮೈಸೂರು ಯುವರಾಜನಿಗೆ ಆದ್ಯವೀರ ಒಡೆಯರ್ ಎಂದು ನಾಮಕರಣ

ಮಗುವಿಗೆ ಭಾನುವಾರ ನಾಮಕರಣವಾಗಿದ್ದು, ಮನೆತನದ ಉತ್ತರಾಧಿಕಾರಿಗೆ ಆದ್ಯವೀರ್ ನರಸಿಂಹರಾಜ ಒಡೆಯರ್ ಎಂದು ನಾಮಕರಣ ಮಾಡಲಾಗಿದೆ...

ಬೆಂಗಳೂರು; ಮೈಸೂರು ರಾಜಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ದಂಪತಿಯ ಮಗುವಿಗೆ ಭಾನುವಾರ ನಾಮಕರಣವಾಗಿದ್ದು, ಮನೆತನದ ಉತ್ತರಾಧಿಕಾರಿಗೆ ಆದ್ಯವೀರ್ ನರಸಿಂಹರಾಜ ಒಡೆಯರ್ ಎಂದು ನಾಮಕರಣ ಮಾಡಲಾಗಿದೆ. 
ಬೆಂಗಳೂರಿನ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಯದುವೀರ ಮತ್ತು ಯುವರಾಣಿ ತ್ರಿಷಿಕಾ ಕುಮಾರಿ ದಂಪತಿಯ ಪುತ್ರನಿಗೆ ನಾಮಕರಣ ನೇರವೇರಿತು. 
ಯದುವಂಶದ ಕುಡಿಗೆ ರಾಜಮಾತೆ ಪ್ರಮೋದಾದೇವಿ ಸಮ್ಮುಖದಲ್ಲಿ ಆದ್ಯವೀರ ನರಸಿಂಹ ರಾಜ ಒಡೆಯರ್ ಎಂದು ನಾಮಕರಣ ಮಾಡಲಾಯಿತು. 
ನಾಮಕರಣ ಸಮಾರಂಭಕ್ಕೆ ಎರಡು ಕುಟುಂಬಗಳಿಗೆ ಸೇರಿದ ಕೆಲವರಿಗೆ ಮಾತ್ರ ಆಹ್ವಾನವನ್ನು ನೀಡಲಾಗಿತ್ತು. ಹೀಗಾಗಿ ಮುದ್ದು ಕಂದನ ನಾಮಕರಣ ಕಾರ್ಯಕ್ರದಲ್ಲಿ ರಾಜ ಕುಟುಂಬಸ್ಥರು, ಆಪ್ತರ ಮಾತ್ರ ಭಾಗಿಯಾಗಿ ಯುವರಾಜನಿಗೆ ಶುಭ ಹಾರೈಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT