ಸದಾನಂದಗೌಡ 
ರಾಜ್ಯ

ರಾಯಚೂರು-ಯಾದಗಿರಿ ಜಿಲ್ಲೆಗಳ ಅಭಿವೃದ್ಧಿಗೆ ರಾಜಕೀಯ ಪಕ್ಷಗಳು ಒಗ್ಗೂಡಲಿ: ಡಿವಿಎಸ್

ರಾಜಕೀಯ ಪಕ್ಷಗಳು ತಮ್ಮ ಭಿನ್ನಾಭಿಪ್ರಾಯವನ್ನು ಮರೆತು ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಬೇಕು...

ಬೆಂಗಳೂರು: ರಾಜಕೀಯ ಪಕ್ಷಗಳು ತಮ್ಮ ಭಿನ್ನಾಭಿಪ್ರಾಯವನ್ನು ಮರೆತು ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಬೇಕು ಎಂದು ನೀತಿ ಆಯೋಗ ತಿಳಿಸಿದೆ. 
ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ. ಸದಾನಂದಗೌಡ, ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್‌, ಗ್ರಾಮೀಣ ನೈರ್ಮಲ್ಯ ಖಾತೆ ರಾಜ್ಯ ಸಚಿವ ರಮೇಶ ಜಿಗಜಿಣಗಿ ಅವರು ವಿಧಾನಸೌಧದಲ್ಲಿ ಸೋಮವಾರ ಈ ಕುರಿತ ಮೊದಲ ಸಭೆ ನಡೆಸಿದರು.
ಸಭೆ ಬಳಿಕ ಮಾತನಾಡಿದ ಸದಾನಂದಗೌಡ, ದೇಶದಲ್ಲಿ 115 ಜಿಲ್ಲೆಗಳು ಅಭಿವೃದ್ಧಿಯಿಂದ ದೂರ ಉಳಿದಿರುವುದನ್ನು ನೀತಿ ಆಯೋಗ ಗುರುತಿಸಿದೆ. ಉಳಿದ ಜಿಲ್ಲೆಗಳ ರೀತಿಯಲ್ಲಿ ಈ ಜಿಲ್ಲೆಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ ಎಂದು ತಿಳಿಸಿದರು.
ಈ ಜಿಲ್ಲೆಗಳ ಸ್ಥಿತಿಗತಿ ಕುರಿತು 70 ಸೂಚ್ಯಂಕಗಳನ್ನು ಮೊದಲು ಗುರುತಿಸಲಾಗುವುದು. ಯಾವ ಕ್ಷೇತ್ರದಲ್ಲಿ ಹಿಂದುಳಿದಿದೆ ಎಂಬ ಬಗ್ಗೆ ತಲಸ್ಪರ್ಶಿ ಪರಿಶೀಲನೆ ನಡೆಸಿದ ನಂತರ ಯೋಜನೆ ಸಿದ್ಧಪಡಿಸಲಾಗುವುದು. ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ಕೃಷಿ ಹಾಗೂ ಆರ್ಥಿಕ ಒಳಗೊಳ್ಳುವಿಕೆ ಹೀಗೆ ಐದು ಕ್ಷೇತ್ರಗಳಿಗೆ ಆದ್ಯತೆ ನೀಡಿ ಏಪ್ರಿಲ್ ಅಂತ್ಯದ ಹೊತ್ತಿಗೆ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಅನುದಾನಗಳನ್ನು ಒಗ್ಗೂ ಡಿಸಿ ಆದ್ಯತಾ ವಲಯಗಳಿಗೆ ವೆಚ್ಚ ಮಾಡಲಾಗುತ್ತದೆ. ರಾಜ್ಯ ಅಥವಾ ಕೇಂದ್ರ ಸಚಿವರ ಹಸ್ತಕ್ಷೇಪ ಇಲ್ಲದಂತೆ ಅಭಿವೃದ್ಧಿಯ ಮುನ್ನೋಟ ಸಿದ್ಧಪಡಿಸಿ, ಅನುಷ್ಠಾನ ಮಾಡುವುದು ಈ ಯೋಜನೆಯ ಆಶಯ ಎಂದರು.
ಒಟ್ಟು ಹಂಚಿಕೆಯಾಗುವ ಅನುದಾನದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ತಲಾ ಶೇ 30ರಷ್ಟು, ಉಳಿದ ಶೇ 40ರಷ್ಟನ್ನು ಇನ್ನಿತರ ಮೂರು ಕ್ಷೇತ್ರಗಳಿಗೆ ಖರ್ಚು ಮಾಡಲು ಅವಕಾಶ ಇರುತ್ತದೆ. ಈ ಜಿಲ್ಲೆಗಳಿಗೆ ಆದ್ಯತೆ ನೀಡಿ ಖರ್ಚು ಮಾಡಲು ಸರ್ಕಾರದ ನೀತಿ ಮತ್ತು ಆದೇಶಗಳಲ್ಲಿ ಬದಲಾವಣೆ ಮಾಡಿಕೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT