ಕಾಳಿ ಹುಲಿ ಸಂರಕ್ಷಿತ ಪ್ರದೇಶದೊಳಗೆ ಅಭಿವೃದ್ಧಿ ಯೋಜನೆಗಳ ಕಾರ್ಯ ನಡೆಯುತ್ತಿರುವುದು 
ರಾಜ್ಯ

ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಅಭಿವೃದ್ಧಿ ಕಾರ್ಯ: ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಎನ್'ಟಿಸಿಎ ಸೂಚನೆ

ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದು ಬೆಳಕಿಗೆ ಬಂದ ಹಿನ್ನಲೆಯಲ್ಲಿ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರಾಧಿಕಾರ ಸೋಮವಾರ ಸೂಚನೆ ನೀಡಿದೆ...

ಬೆಂಗಳೂರು: ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದು ಬೆಳಕಿಗೆ ಬಂದ ಹಿನ್ನಲೆಯಲ್ಲಿ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರಾಧಿಕಾರ ಸೋಮವಾರ ಸೂಚನೆ ನೀಡಿದೆ. 
ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮವಾಗಿ ರಸ್ತೆ ಕಾಮಗಾರಿ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವ ಪ್ರಕರಣ ಇತ್ತೀಚೆಗಷ್ಟೇ ಬೆಳಕಿಗೆ ಬಂದಿತ್ತು. ಈ ಬಗ್ಗೆ ಎನ್'ಟಿಸಿಎ (ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರಾಧಿಕಾರ)ಕ್ಕೆ ಸಾಕಷ್ಟು ದೂರುಗಳು ಸಲ್ಲಿಕೆಯಾಗಿದ್ದವು. 
ಈ ಹಿನ್ನಲೆಯಲ್ಲಿ ಪ್ರಕಣವನ್ನು ಗಂಭೀರವಾಗಿ ಪರಿಗಣಿಸಿರುವ ಎನ್'ಟಿಸಿಎ ಅಕ್ರಮ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಪರಿಶೀಲನೆ ನಡೆಸಿ 30 ದಿನಗಳೊಳಗಾಗಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 
ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಟ್ಟು 8 ಅಭಿವೃದ್ಧಿ ಯೋಜನೆಗಳ ಕಾರ್ಯಗಳು ನಡೆಯುತ್ತಿದ್ದು, ಇದರಲ್ಲಿ ಕೆಲವು ಯೋಜನೆಗಳ ಕಾರ್ಯ ಈಗಾಗಲೇ ಪೂರ್ಣಗೊಂಡಿವೆ. ಪ್ರಸ್ತುತ ಪ್ರಗತಿಯಲ್ಲಿಯುವ ಕಾರ್ಯಗಳನ್ನು ಕೂಡಲೇ ನಿಲ್ಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಬ್ಬು ಬೆಳೆಗಾರರ ಕಿಚ್ಚು: ಬೆಳಗಾವಿಯಲ್ಲಿ ಪೊಲೀಸರ ಲಾಠಿ ಚಾರ್ಜ್ ವಿರುದ್ಧ ಸಿಡಿದೆದ್ದ ರೈತರು; ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ!

ಸಿದ್ದರಾಮಯ್ಯ ಕೆಳಗಿಳಿಸುವುದು ಅಷ್ಟು ಸುಲಭವಲ್ಲ, ಅವರ ಸಾಮರ್ಥ್ಯದ ಬಗ್ಗೆ ನಮಗಷ್ಟೇ ಗೊತ್ತು: ಎಚ್‌ಡಿಕೆ

ದೆಹಲಿಯಲ್ಲಿ ಮತ ಚಲಾಯಿಸಿದ ಬಿಜೆಪಿ ನಾಯಕರು ಬಿಹಾರದಲ್ಲೂ ವೋಟ್ ಮಾಡಿದ್ದಾರೆ: ರಾಹುಲ್ ಗಾಂಧಿ

ಹರಿಯಾಣ: ಗಲಾಟೆ ಬಿಡಿಸಲು ಹೋದ ಸಬ್‌ಇನ್ಸ್‌ಪೆಕ್ಟರ್‌ಗೆ ಹೊಡೆದು ಕೊಂದ ಜನ!

Bihar polls: 'ಇಬ್ಬರೂ ಉಪಮುಖ್ಯಮಂತ್ರಿಗಳು ಸೇರಿ 12 ಸಚಿವರು ಸೋಲುತ್ತಾರೆ, ಎನ್‌ಡಿಎ ಅಧಿಕಾರ ಕಳೆದುಕೊಳ್ಳಲಿದೆ'

SCROLL FOR NEXT