ರಾಜ್ಯ

ಮಂಗಳೂರು: ಹಿಂದು ಕಾರ್ಯಕರ್ತನ ಬರ್ಬರ ಹತ್ಯೆ

Raghavendra Adiga
ಮಂಗಳೂರು: ಹಿಂದೂಪರ ಸಂಘಟನೆಯ ಕಾರ್ಯಕರ್ತನಾಗಿದ್ದ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಕಾಟಿಪಳ್ಳದಲ್ಲಿ ಈ ಹತ್ಯೆ ನಡೆದಿದ್ದು ಮೃತ ಯುವಕನನ್ನು ದೀಪಕ್‌ ಎಂದು ಗುರುತಿಸಲಾಅಗಿದೆ.
ಸಿಮ್ ಕಾರ್ಡ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡುತ್ತಿದ್ದ ದೀಪಕ್ ಕಾಟಿಪಳ್ಳದ ಕೈಕಂಬ ನಿವಾಸಿಯಾಗಿದ್ದರು. ಇಂದು ಅವರು ಕಾಟಿಪಳ್ಳದ ಮೊಬೈಲ್ ಅಂಗಡಿಗಳಿಗೆ ಸಿಮ್ ಕಾರ್ಡ್ ಡಿಸ್ಟ್ರಿಬ್ಯೂಟ್ ಗಾಗಿ ತೆರಳಿದ್ದರು. ಆ ವೇಳೆ ದುಷ್ಕರ್ಮಿಗಳು ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಚ್ಚಿ ಕೊಲೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು  ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಘಟನೆ ವರದಿಯಾಗುತ್ತಿದ್ದಂತೆಯೇ ಸುತ್ತಮುತ್ತಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು 
ಘಟನೆ ಬಗ್ಗೆ ಪ್ರತ್ಯಕ್ಷ ದರ್ಶಿಯೊಬ್ಬರು ಮಾಹಿತಿ ನೀಡಿದ್ದು, ಮಧ್ಯಾಹ್ನ 1:30 ರ ವೇಳೆಗೆ ದೀಪಕ್ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಯುವಕರ ಗುಂಪೊಂದು ಅಡ್ಡ ಹಾಕಿತ್ತು. ದೀಪಕ್ ತಪ್ಪಿಸಿಕೊಳ್ಳುವುದಕ್ಕೂ ಮುನ್ನ ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು. ದಾಳಿಯಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ದೀಪಕ್ ನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಬದುಕುಳಿಯಲಿಲ್ಲ ಎಂದು ಹೇಳಿದ್ದಾರೆ. 
SCROLL FOR NEXT