ಶೋಭಾ ಡ್ರೀಮ್ ಏಕರ್ಸ್ - ಸಾಂದರ್ಭಿಕ ಚಿತ್ರ 
ರಾಜ್ಯ

ಕಟ್ಟಡ ನಿರ್ಮಾಣ ಕಾರ್ಮಿಕರ ಅನಾರೋಗ್ಯ ಪ್ರಕರಣ: ಸ್ಥಳಕ್ಕೆ ಕಾರ್ಮಿಕ ಇಲಾಖೆ ಅಧಿಕಾರಿಗಳ ಭೇಟಿ

ವರ್ತೂರು ಶೋಭಾ ಡ್ರೀಮ್ಸ್ ಏಕರ್ಸ್ ನಲ್ಲಿ ಅಶುದ್ದ ನೀರು ಸೇವನೆಯಿಂದ ಮೂವರು ಕಾರ್ಮಿಕರು ಮೃತಪಟ್ಟ ಹಿನ್ನೆಲೆಯಲ್ಲಿ ಸೋಮವಾರ ಶೋಭಾ ಡ್ರೀಮ್ಸ್ ಸ್ಥಳಕ್ಕೆ ಕಾರ್ಮಿಕ ಇಲಾಖೆ ಅಧಿಕಾರಿಗಳು........

ಬೆಂಗಳೂರು: ವರ್ತೂರು ಶೋಭಾ ಡ್ರೀಮ್ಸ್ ಏಕರ್ಸ್ ನಲ್ಲಿ ಅಶುದ್ದ ನೀರು ಸೇವನೆಯಿಂದ ಮೂವರು ಕಾರ್ಮಿಕರು ಮೃತಪಟ್ಟ ಹಿನ್ನೆಲೆಯಲ್ಲಿ ಸೋಮವಾರ ಶೋಭಾ ಡ್ರೀಮ್ಸ್ ಸ್ಥಳಕ್ಕೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು. ಈ ವೇಳೆ ಶೋಭಾ ಡೆವಲಪರ್ಸ್ ಸಂಸ್ಥೆಗೆ ಅವರು ನೋಟೀಸ್ ನೀಡಿದ್ದಾರೆ. 
ಕಾರ್ಮಿಕರು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಸ್ಥೆಯಲ್ಲಿ  ನೊಂದಾಯಿಸಿದವರಾಗಿದ್ದರೆ, ಅವರ ಕುಟುಂಬಗಳಿಗೆ 2 ಲಕ್ಷ ರೂ. ಇಲ್ಲದಿದ್ದರೆ, ಕೆಲಸಗಾರರ ಪರಿಹಾರನಿಧಿ ಕಾಯ್ದೆ ಪ್ರಕಾರ ಅವರಿಗೆ ಹಣ ನೀಡಲಾಗುತ್ತದೆ.
"ನಾವು ಕಾರ್ಮಿಕ ಆಯುಕ್ತರು ಮತ್ತು ಬಿಬಿಎಂಪಿ ಆರೋಗ್ಯ ಆಯುಕ್ತರನ್ನು ಭೇಟಿ ಮಾಡಿದ್ದೇವೆ. ಲೇಬರ್ ಕಮೀಷನರ್ ಅವರು ತನಿಖೆಯನ್ನು ನಡೆಸುತ್ತಿರುವುದಾಗಿ ಹೇಳಿದ್ದಾರೆ ಮತ್ತು ತಪ್ಪಿತಸ್ಥರೆಂದು ಕಂಡುಬಂದರೆ, ಶೋಬಾ ಡೆವಲಪರ್ಸ್ ಸಂಸ್ಥೆಗೆ ನೀಡಲಾಗಿರುವ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದಿದ್ದಾರೆ."ಪರ್ಯಾಯ ಕಾನೂನು ವೇದಿಕೆಯ ಸದಸ್ಯೆ ದರ್ಶನಾ ಮಿತ್ರ ಹೇಲಿದರು.
"ವಾರಾಂತ್ಯದಲ್ಲಿ ಎಲ್ಲಾ ನಿರ್ಮಾಣ ಸ್ಥಳಗಳನ್ನು ಪರಿಶೀಲಿಸಲು ಅವರು ಬಿಬಿಎಂಪಿ ಸಾರ್ವಜನಿಕ ಆರೋಗ್ಯ ಅಧಿಕಾರಿ ಕಲ್ಪನಾ ಅವರಿಗೆ ನಾವು ಸೂಚನೆ ನೀಡಿದ್ದೇವೆ ಎಂದು ಆರೋಗ್ಯ ಆಯುಕ್ತ ಸರ್ಫರಾಜ್ ಖಾನ್ ಹೇಳಿದ್ದಾರೆ." ಎಂದು ಅವರು ಹೇಳಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT