ಸಾಂದರ್ಭಿಕ ಚಿತ್ರ 
ರಾಜ್ಯ

ತೀವ್ರಗೊಂಡ ಮಹದಾಯಿ ಹೋರಾಟ: ಮತ್ತೆ ನರಗುಂದ ಬಂದ್

ಮಹದಾಯಿ ನದಿ ನೀರಿಗಾಗಿ ರೈತಪರ ಸಂಘಟನೆಗಳು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ರೈತರ ಹೋರಾಟದೊಂದಿಗೆ ಕೈಜೋಡಿಸಿರುವ ಬಿಜೆಪಿ ಬುಧವಾರ ನರಗುಂದ ಬಂದ್'ಗೆ ಕರೆ ನೀಡಿದೆ...

ಗದಗ: ಮಹದಾಯಿ ನದಿ ನೀರಿಗಾಗಿ ರೈತಪರ ಸಂಘಟನೆಗಳು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ರೈತರ ಹೋರಾಟದೊಂದಿಗೆ ಕೈಜೋಡಿಸಿರುವ ಬಿಜೆಪಿ ಬುಧವಾರ ನರಗುಂದ ಬಂದ್'ಗೆ ಕರೆ ನೀಡಿದೆ. 
ಬಿಜೆಪಿ ಬಂದ್'ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ನರಗುಂದ ತಾಲೂಕಿನಲ್ಲಿ ಇಂದು ಬೆಳಿಗ್ಗೆ 5ಗಂಟೆಯಿಂದಲೇ ಬಂದ್ ಪ್ರಾರಂಭವಾಗಿದೆ. ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯನ್ನು ತಡೆ ಹಿಡಿದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪರಿಣಾಮ ಹುಬ್ಬಳ್ಳಿ-ಬೆಂಗಳೂರು, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ನಡುವಿನ ವಾಹನ ಸಂಚಾರ ಸ್ಥಗಿತಗೊಂಡು ವಾಹನಗಳಿಲ್ಲದೆ ಹೆದ್ದಾರಿಗಳು ಬಿಕೋ ಎನ್ನುತ್ತಿವೆ. 
ಅಲ್ಲದೆ, ಬಿಜೆಪಿ ಕಾರ್ಯಕರ್ತರು ನರಗುಂದದ ಗಲ್ಲಿ ಗಲ್ಲಿಗಳಲ್ಲಿ ಟಯರ್ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಬಂದ್ ಹಿನ್ನಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಬಸ್ ಗಳ ಸಂಚಾರ ಸ್ಥಗಿತಗೊಂಡಿದೆ. ಬಸ್ ಸಂಚಾರ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ನಿಲ್ದಾಣಗಳಲ್ಲಿ ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿದೆ. 
ನರಗುಂದದಲ್ಲಿ ಬಂದ್ ಆಚರಿಸುತ್ತಿರುವ ಹಿನ್ನಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಿರುವ ಪೊಲೀಸರು ಈಗಾಗಲೇ ಜಿಲ್ಲೆಯಲ್ಲಿ 3 ಡಿವೈಎಸ್ಪಿ, 10 ಸಿಪಿಐ, 14 ಪಿಎಸ್ಐ, 29 ಎಎಸ್ಐ. ಕೆಎಸ್ಆರ್'ಪಿ, 5 ಡಿಆರ್ ತುಕಡಿ, 120 ಪೊಲೀಸರು, 100ಕ್ಕೂ ಹೆಚ್ಚು ಗೃಹ ರಕ್ಷಕ ದಳದ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT