ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಅಂತರ್ಜಲ ಮಟ್ಟದಲ್ಲಿ ತೀವ್ರ ಕುಸಿತ, ಕೇಂದ್ರ ಅಂತರ್ಜಲ ಮಂಡಳಿ ವರದಿಯಲ್ಲಿ ಬಹಿರಂಗ

ಕೇಂದ್ರ ಅಂತರ್ಜಲ ಮಂಡಳಿ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ರಾಜ್ಯದಲ್ಲಿ ಅಂತರ್ಜಲ ಪ್ರಮಾಣ ಎಷ್ಟಿದೆ ಎನ್ನುವುದನ್ನು ವರದಿ ಮಾಡಿತ್ತು.

ಬೆಂಗಳೂರು: ಕೇಂದ್ರ ಅಂತರ್ಜಲ ಮಂಡಳಿ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ರಾಜ್ಯದಲ್ಲಿ ಅಂತರ್ಜಲ ಪ್ರಮಾಣ ಎಷ್ಟಿದೆ ಎನ್ನುವುದನ್ನು ವರದಿ ಮಾಡಿತ್ತು. ಇದರ ಪ್ರಕಾರ ಕರ್ನಾಟಕದಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತ ಕಂಡಿದ್ದು ಶೇ.69ರಷ್ಟು ಬಾವಿಗಳ ಅಂತರ್ಜಲ ಕುಸಿದಿದೆ ಎಂದು ವರದಿಯಾಗಿದೆ.
ಅಂತರ್ಜಲ ಕುಸಿತದ ಕಾರಣ ಈ ಬಾರಿ ಬೇಸಿಗಯಲ್ಲಿ ತೀವ್ರ ತರದ ಬರಗಾಲ ಎದುರಿಸುವ ಪರಿಸ್ಥಿತಿ ಬರಲಿದೆ. ಹೀಗೇ ಮುಂದುವರಿದರೆ ಬಹುತೇಕ ಮರುಭೂಮಿಯಾಗಿರುವ ರಾಜಸ್ಥಾನಕ್ಕಿಂತಲೂ ಕೆಟ್ಟ ಪರಿಸ್ಥಿತಿ ನಮಗೆದುರಾಗಲಿ ಎಂದು ವರದಿಯಲ್ಲಿ ಹೇಳಲಾಗಿದೆ. ರಾಜ್ಯದಲ್ಲಿ ಶೇ.50ರಷ್ಟು ಬಾವಿಗಳಲ್ಲಿ ಅಂತರ್ಜಲ ಮಟ್ಟ ಕುಸಿತ ಕಂಡಿದೆ. ನಗರ ಕೇಂದ್ರಗಳಲ್ಲಿ ಬಿಡುವಿಲ್ಲದ ನಿರ್ಮಾಣ ಕಾಮಗಾರಿಗಳು, ಅತಿಯಾದ ಜನಸಂಖ್ಯೆ ಮತ್ತು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಅವೈಜ್ಞಾನಿಕ ಕೃಷಿ ಪದ್ದತಿ ಅಲವಡಿಸಿಕೊಂಡಿರುವುದು ಇಂದಿನ ಈ ದಾರುಣ ಸ್ಥಿತಿಗೆ ಕಾರಣ.
ಇನ್ನು ಇಂಡಿಯನ್ ಎಕ್ಸ್ ಪ್ರೆಸ್ ಗೆ ಸಿಕ್ಕಿರುವ ವರದಿ ಪ್ರತಿ ಹೇಳಿದಂತೆ ದಕ್ಷಿಣದ ನಾಲ್ಕು ರಾಜ್ಯಗಳಾದ ಕರ್ನಾಟಕ, ಆಂದ್ರ ಪ್ರದೇಶ, ತಮಿಳು ನಾಡು ಹಾಗೂ ಕೇರಳಗಳಲ್ಲಿ ಅಂತರ್ಜಲ ಪ್ರಮಾಣ ತೀವ್ರತರವಾಗಿ ಕುಸಿದಿದೆ. ಇದರಲ್ಲಿ ಆಂದ್ರ ಪ್ರದೇಶದಲ್ಲಿ ಶೇ.75 ರಷ್ಟು ಬಾವಿಗಳಲ್ಲಿ ನೀರಿನ ಕೊರತೆ ಇದ್ದರೆ ತಮಿಳು ನಾಡಿನ 87 ಹಾಗು ಕೇರಳದ 70 ಶೇ. ಬಾವಿಗಳು ಒಣಗುವ ಸೂಚನೆ ಇದೆ. ತೆಲಂಗಾಣ, ಮಧ್ಯ ಪ್ರದೇಶ, ರಾಜಸ್ಥಾನ, ತ್ರಿಪುರಾ ಹಾಗು ಗುಜರಾತ್ ಗಳಲ್ಲಿ ಅಂತರ್ಜಲ ಮಟ್ಟ ದಕ್ಷಿಣ ರಾಜ್ಯಗಳಿಗಿಂತ ಉತ್ತ್ಮ ಸ್ಥಿತಿಯಲ್ಲಿದೆ ಎಂದು ವರದಿಯಲ್ಲಿ ಹೇಳಿದೆ.
"ರಾಗಿ, ತೆಂಗಿನಕಾಯಿ, ಬಾಳೆ, ಅಡಿಕೆ, ಕಬ್ಬು ಮತ್ತು ಇತರಹೆಚ್ಚು ನೀರು ಬೇಕಾಗುವ ಬೆಳೆಗಳಿಗೆ ರೈತರು ಹರಿವ ನೀರಿನ ಮೂಲಗಳಿಂದ ನೀರನ್ನು ಹಾಯಿಸುವ ಬದಲು ಕೊಳವೆ ಬಾವಿಗಳನ್ನು ತೊಡೊಸೊ ನೀರು ಹಾಯಿಸುತ್ತಿದ್ದಾರೆ. ಕೃಷಿಗೆ ಸಾಕಷ್ಟು ನೀರು ಅಗತ್ಯವಾಗಿರುವ ಕಾರಣ ನಿತ್ಯವೂ ಸಾವಿರಾರು ಲೀಟರ್ ನೀರನ್ನು ಭೂಮಿಯಿಂದ ಎಳೆದುಕೊಳ್ಳಲಾಗುತ್ತಿದೆ. ಇದೇ ಕಾರನಕ್ಕೆ ಇಂದು ಅಂತರ್ಜಲ ಮಟ್ಟ ಇಷ್ಟೊಂದು ಪ್ರಮಆಣದಲ್ಲಿ ಕುಸಿದಿದೆ." ಸಿ.ಜಿ.ಡಬ್ಲ್ಯೂ.ಬಿ.ನಲ್ಲಿ ವಿಜ್ಞಾನಿ ಆಗಿರುವ ಜಯಪ್ರಕಾಶ್ ಹೇಳಿದ್ದಾಅರೆ.
ಕೊಳವೆ ಬಾವಿಗಳ ಅತಿಯಾದ ಬಲಕೆಯೇ ಅಂತರ್ಜಲ ಮಟ್ಟ ಕುಸಿಯುವುದಕ್ಕೆ ಕಾರಣ ಎನ್ನುವ ಮಾಜಿ ನೀರಾವರಿ ಇಲಾಖಾ ಕಾರ್ಯದರ್ಶಿ ಜಲ ತಜ್ಞ ಕ್ಯಾಪ್ಟನ್ ರಾಜಾ ರಾವ್ ರಾಜ್ಯದಲ್ಲಿ ಕರ್ನಾಟಕ ಅಂತರ್ಜಲ (ನಿಯಂತ್ರಣ ಮತ್ತು ಅಭಿವೃದ್ಧಿ ನಿರ್ವಹಣೆ ಕಾಯಿದೆ ಪರಿಣಾಮಕಾರಿಯಾಗಿ ಜಾರಿಯಾಗಿಲ್ಲ ಎನ್ನುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT