ಅಪಘಾತ 
ರಾಜ್ಯ

ಹೃದಯವಿದ್ರಾವಕ ಘಟನೆ: ವಿವಾಹ ಆಹ್ವಾನ ಪತ್ರಿಕೆ ಹಂಚಿ ಹಿಂದಿರುಗುವಾಗ ಅಪಘಾತ; ಮಧುಮಗ, ತಾಯಿ ಸಾವು

ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮದುವೆ ನಿಶ್ಚಯವಾಗಿದ್ದ ಮಧುಮಗ ಮತ್ತು ಆತನ ತಾಯಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮದುವೆ ನಿಶ್ಚಯವಾಗಿದ್ದ ಮಧುಮಗ ಮತ್ತು ಆತನ ತಾಯಿ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. 
ಜನವರಿ 22ರಂದು 26 ವರ್ಷದ ಮೃತ ಮಂಜುನಾಥ ಹಸೆಮಣೆ ಹೇರಬೇಕಿತ್ತು. ಆದರೆ ವಿಧಿಯಾಟ ಬೇರೆಯೇ ಇತ್ತು. ಮಂಜುನಾಥ್ ಮತ್ತು ಆತನ ತಾಯಿ 48 ವರ್ಷದ ಕಂಬಕ್ಕ ಇಬ್ಬರು ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಹಿಂದಿರುಗುವಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 
ಬೈಕ್ ನಲ್ಲಿ ತಾಯಿ ಮತ್ತು ಮಗ ಇಬ್ಬರು ಬಂಧು ಮಿತ್ರರಿಗೆ ಆಹ್ವಾನ ಪತ್ರಿಕೆ ಹಂಚುತ್ತಿದ್ದರು. ಮಧುಗಿರಿ-ಪಾವಗಡ ನಡುವಿನ ಕೆಶಿಪ್ ರಸ್ತೆಯ ಪಡಸಾಲಹಟ್ಟಿ ಬಸ್ ತಂಗುದಾಣದ ಬಲಿ ಬೈಕ್ ಗೆ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತಾಯಿ ಕಂಬಕ್ಕ ಸ್ಥಳದಲ್ಲೇ ಮೃತಪಟ್ಟಿದ್ದು ಮಧುಮಗ ಮಂಜುನಾಥ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT