ಅಣ್ಣಾ ಹಜಾರೆ 
ರಾಜ್ಯ

ಸಚಿವ ಅನಂತಕುಮಾರ್ ಹೆಗಡೆಗೆ ಮಾನಸಿಕ ಚಿಕಿತ್ಸೆ ಕೊಡಿಸಬೇಕು: ಅಣ್ಣಾ ಹಜಾರೆ

ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರನ್ನು ಮಾನಸಿಕ ರೋಗಿಗಳ...

ಬೆಳಗಾವಿ: ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರನ್ನು ಮಾನಸಿಕ ರೋಗಿಗಳ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಬೇಕು ಎಂದು ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಶುಕ್ರವಾರ ಹೇಳಿದ್ದಾರೆ. 
ನಗರದಲ್ಲಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಣ್ಣ ಹಜಾರೆ ಅವರು, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. 
ಭಾರತದ ವ್ಯವಸ್ಥೆ ನಿಂತಿರುವುದೇ ಸಂವಿಧಾನದ ಆಶಯಗಳ ಮೇಲೆ. ಸಂವಿಧಾನಕ್ಕೆ ಅನುಗುಣವಾಗಿಯೇ ಎಲ್ಲ ಸರ್ಕಾರಗಳು ನಡೆಯುತ್ತಿರುವುದು. ಹಾಗಾಗಿ, ಅದನ್ನು ಬದಲಿಸುವ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿದ ಅಣ್ಣಾ ಹಜಾರೆ ಅವರು, 500 ಹಾಗೂ 1000 ರುಪಾಯಿ ನೋಟುಗಳನ್ನು ರದ್ದು ಮಾಡಿದ್ದರಿಂದ ದೇಶದಲ್ಲಿ ಭ್ರಷ್ಟಾಚಾರ ಕಡಿಮೆಯಾಗಿಲ್ಲ. ಭ್ರಷ್ಟಾಚಾರ ಮುಕ್ತ ದೇಶ ನಿರ್ಮಾಣ ಮಾಡುವಲ್ಲಿ ಮೋದಿ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT