ಅವಳಿ ನಗರದ ಪೊಲೀಸರೀಗ ಹೈಟೆಕ್; ಶಾಂತಿ ಕದಡುವವರ ಮೇಲೆ ಕಣ್ಣಿಡಲಿದೆ ಕಮಾಂಡ್ ವಾಹನ 
ರಾಜ್ಯ

ಅವಳಿ ನಗರದ ಪೊಲೀಸರೀಗ ಹೈಟೆಕ್; ಶಾಂತಿ ಕದಡುವವರ ಮೇಲೆ ಕಣ್ಣಿಡಲಿದೆ ಕಮಾಂಡ್ ವಾಹನ

ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆಯನ್ನು ಹೊಂದಿರುವ ಕಮಾಂಡ್ ವಾಹನಗಳು ಅವಳಿ ನಗರ ಹುಬ್ಭಳ್ಳಿ-ಧಾರವಾಡ ಮಹಾನಗರದ ರಸ್ತೆಗಿಳಿಯಲು ಸಜ್ಜಾಗಿದ್ದು, ಈ ಮೂಲಕ ಕಮಾಂಡ್ ವಾಹನಗಳನ್ನು ಹೊಂದಿದ ಮಹಾನಗರವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ...

ಹುಬ್ಬಳ್ಳಿ: ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆಯನ್ನು ಹೊಂದಿರುವ ಕಮಾಂಡ್ ವಾಹನಗಳು ಅವಳಿ ನಗರ ಹುಬ್ಭಳ್ಳಿ-ಧಾರವಾಡ ಮಹಾನಗರದ ರಸ್ತೆಗಿಳಿಯಲು ಸಜ್ಜಾಗಿದ್ದು, ಈ ಮೂಲಕ ಕಮಾಂಡ್ ವಾಹನಗಳನ್ನು ಹೊಂದಿದ ಮಹಾನಗರವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 
ಬೆಂಗಳೂರು ನಗರದಲ್ಲಿರುವ ಗಸ್ತು ವಾಹನಗಳಿಗೆ ಹೋಲಿಸಿದರೆ, ಹುಬ್ಬಳ್ಳಿ ಹಾಗೂ ಧಾರವಾಡದ ಕಮಾಂಡ್ ವಾಹನಗಳು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ವಾಹನಗಳಾಗಿವೆ. ಕಮಾಂಡ್ ವಾಹಗಳು ನಗರದ ರಸ್ತೆಗಳ ಮೇಲೆ ನಿರಂತರವಾಗಿ ಕಣ್ಗಾವಲಿರಿಸಲಿದ್ದು, ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಂದರ್ಭಗಳಲ್ಲಿ ಕಮಾಂಡ್ ವಾಹನಗಳು ಪ್ರಮುಖ ಪಾತ್ರ ವಹಿಸುತ್ತವೆ. 
ಕಮಾಂಡ್ ವಾಹನಗಳಲ್ಲಿ ಒಟ್ಟು 19 ಕ್ಯಾಮೆರಾಗಳಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟಾದಾಗ 19 ಪೊಲೀಸ್ ಸಿಬ್ಬಂದಿಗಳು ಮಾಡುವಂತಹ ಕೆಲಸದ ಸಾಮರ್ಥ್ಯ ಈ ವಾಹನ ಹೊಂದಿರುತ್ತದೆ ಎಂದು ಉಪ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ರೇಣುಕಾ ಸುಕುಮಾರ್ ಅವರು ಹೇಳಿದ್ದಾರೆ. 
ಕಮಾಂಡ್ ವಾಹನ ಮೊಬೈಲ್ ಪೊಲೀಸ್ ಠಾಣೆಯಂತಿದ್ದು, ಇದರಲ್ಲಿ ವಿಡಿಯೋ ವಾಲ್, ಪಾಲ್-ಟಿಲ್ಟ್-ಝೂಮ್ ಕ್ಯಾಮೆರಾಗಳು ಸೇರಿದಂತೆ ಎಲ್ಲಾ ರೀತಿಯ ಸಂವಹನ ವ್ಯವಸ್ಥೆಯನ್ನು ಅಳವಡಿಸಲಾಗಿದೆ. 
ಮೆರವಣಿಗೆ, ಅಹಿತಕರ ಘಟನೆ, ಚುನಾವಣಾ ರ್ಯಾಲಿ ಸಂದರ್ಭಗಳಲ್ಲಿ ಸಮಾಜ ವಿರೋಧಿ ಚಟುವಟಿಕೆ ನಡೆಸುತ್ತಿರುವ ಗುಂಪಿನಲ್ಲಿರುವವರನ್ನು ಗುಪ್ತ ಕ್ಯಾಮೆರಾಗಳನ್ನು ಧರಿಸಿರುವ ಸಿಬ್ಬಂದಿ ಮೂಲಕ ಫೋಟೋಗಳನ್ನು ಸೆರೆ ಹಿಡಿಯಲಾಗುತ್ತದೆ. ಕಮಾಂಡ್ ವಾಹನದಲ್ಲಿ ಸೆರೆ ಹಿಡಿಯಲಾದ ಫೋಟೋಗಳು ಹಾಗೂ ಸಂದೇಶಗಳು ನೇರವಾಗಿ ಸಂಚಾರ ನಿರ್ವಹಣಾ ಕೇಂದ್ರಕ್ಕೆ ತಲುಪುತ್ತವೆ. ಅಲ್ಲಿಂದಲೇ ಮೇಲಾಧಿಕಾರಿಗಳು ಪರಿಸ್ಥಿತಿಯನ್ನು ನಿಭಾಯಿಸಬಹುದಾಗಿದೆ ಎಂದು ಹೇಳಿದ್ದಾರೆ. 
ಇಂಟರ್ನೆಟ್ ಸಂಪರ್ಕ ಕೂಡ ಇದ್ದು, ಇದರಿಂದ ಸಂಚಾರ ನಿರ್ವಹಣಾ ಕೊಠಡಿಯನ್ನು ಸಂಪರ್ಕಿಸಬಹುದಾಗಿದೆ. ವಾಹನದಲ್ಲಿ ಯುಪಿಎಸ್ ವ್ಯವಸ್ಥೆಯಿದ್ದು, ಇದರಿಂದ ಗುಗ್ರಾಮಗಳಲ್ಲೂ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ. 
ವಾಹನದಲ್ಲಿರುವ ವೈಯರ್ ಲೆಸ್ ವ್ಯವಸ್ಥೆ ಮತ್ತು ಕಂಪ್ಯೂಟ್ ವಿಭಾಗಕ್ಕಾಗಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT