ಚೌಧರಿ ಬೀರೇಂದರ್‌ ಸಿಂಗ್‌ 
ರಾಜ್ಯ

ಮೈಸೂರಿನಲ್ಲಿ ಚಿನ್ನದ ನಿಕ್ಷೇಪ ಪತ್ತೆ, ಶೋಧ ಕಾರ್ಯಾಚರಣೆ ನಡೆಸಲು ಕೆಐಒಸಿಎಲ್‌ ಸಜ್ಜು

ಮೈಸೂರಿನಲ್ಲಿ ಚಿನ್ನ ಹಾಗೂ ತಮಿಳು ನಾಡಿನಲ್ಲಿ ಕಬ್ಬಿಣ ನಿಕ್ಷೇಪಗಳು ಪತ್ತೆಯಾಗಿದೆ

ಮಂಗಳೂರು: ಮೈಸೂರಿನಲ್ಲಿ ಚಿನ್ನ ಹಾಗೂ ತಮಿಳು ನಾಡಿನಲ್ಲಿ ಕಬ್ಬಿಣ ನಿಕ್ಷೇಪಗಳು ಪತ್ತೆಯಾಗಿದೆ ಎಂದು ಕೇಂದ್ರ ಉಕ್ಕು ಸಚಿವ ಚೌಧರಿ ಬೀರೇಂದರ್‌ ಸಿಂಗ್‌ ಹೇಳಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.
ಮಂಗಳೂರಿನ ಹೊರವಲಯದ ಕೆಐಒಸಿಎಲ್‌ ಕಾರ್ಖಾನೆಯ ಖಾಲಿ ಜಾಗದಲ್ಲಿ ಒಂದು ಮೆಗಾವ್ಯಾಟ್‌ ಸಾಮರ್ಥ್ಯದ ಸೌರ ವಿದ್ಯುತ್‌ ಘಟಕಕ್ಕೆ ಶಂಕುಸ್ಥಾಪನೆ ಮತ್ತು ಡಿಜಿಟಲ್‌ ಕಿಯೋಸ್ಕ್‌ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವರು "ಮೈಸೂರು ಹಾಗೂ ತಮಿಳು ನಾಡಿನ ತಿರುವೂರ್ ನಲ್ಲಿ ಚಿನ್ನ ಹಾಗೂ ಕಬ್ಬಿಣ ಅದಿರಿನ ನಿಕ್ಷೇಪಗಳು ಪತ್ತೆಯಾಗಿದ್ದು ಇದರ ಕುರಿತಂತೆ ವಿವರ ಶೋಧ ಕಾರ್ಯಾಚರಣೆ ನಡೆಸಿ ಅಲ್ಲಿ ಲಭ್ಯವಾಗುವ ಚಿನ್ನ ಹಾಗೂ ಕಬ್ಬಿಣದ ಅದಿರಿನ ಪ್ರಮಾಣ ಹಾಗೂ ಗುಣಮಟ್ಟ ಸಂಬಂಧ ವರದಿ ತಯಾರಿಸಿ ನೀಡುವಂತೆ ಕೆಐಒಸಿಎಲ್‌ ಗೆ ಸೂಚಿಸಿದ್ದೇವೆ" ಎಂದು ಹೇಳಿದ್ದಾರೆ.
ದೇಶದಲ್ಲಿ ಹೊಸ ಕಲ್ಲಿದ್ದಲಿನ ನಿಕ್ಷೇಪಗಳು ಪತ್ತೆಯಾದಲ್ಲಿ ಮಂಗಳೂರಿನ ಕೆಐಒಸಿಎಲ್‌ ಉತ್ಪಾದನೆ ಸಾಮರ್ಥ್ಯ ಹೆಚ್ಚಳ ಮಾಡಲು ಸಹಕಾರಿಯಾಗಲಿದೆ ಎಂದು ಸಚಿವರು ಅಭಿಪ್ರಾಯ ಪಟ್ಟಿದ್ದಾರೆ.
ಕೆಐಒಸಿಎಲ್‌ನ ಊದು ಕುಲುಮೆಯನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾಪ ಶೀಘ್ರವಾಗಿ ಜಾರಿಯಾಗಲಿದೆ. ೀ ಕಾರ್ಯ ಮುಗಿದ ತಕ್ಶಃಅಣಕ್ಕೆ ಅಲ್ಲಿ 2 ಲಕ್ಷ ಟನ್‌ ಸಾಮರ್ಥ್ಯದ ಡಿಐ (ಡಕ್ಟೈಲ್‌ ಐಯರ್ನ್‌) ಪೈಪ್‌ಗಳನ್ನು ತಯಾರಿಸುವ ಘಟಕ  ಸ್ಥಾಪನೆಗೆ ಅವಕಾಶವಾಗಲಿದೆ. ಈ ಯೋಜನೆ ಪೂರ್ಣಗೊಂಡರೆ ದೇಶದ ಮೂರನೇ ಘಟಕವಾಗಿ ಕಾರ್ಯ ನಿರ್ವಹಿಸಲಿದ್ದು ತುಕ್ಕು ರಹಿತ, ಸೋರಿಕೆ ರಹಿತ ಪೈಪ್ ಗಳನ್ನಿಲ್ಲಿ ತಯಾರಿಸಬಹುದು. ಇವುಗಳನ್ನು ನೀರು ಸರಬರಾಜು ಕಾರ್ಯಗಳಿಗೆ ಬಳಸಿಕೊಳ್ಳಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.
"ಬಳ್ಳಾರಿಯಲ್ಲಿ ಇದಾಗಲೇ ಮ್ಯಾಂಗನೀಸ್ ಗಣಿಗಾರಿಕೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ 2 ಮಿಲಿಯನ್‌ ಟನ್‌ ಸಾಮರ್ಥ್ಯದ ಕಬ್ಬಿಣದ ಉಂಡೆ ತಯಾರಿ ಘಟಕವನ್ನು ಬಳ್ಳಾರಿಯಲ್ಲಿ ಸ್ಥಾಪನೆ ಮಾಡಲಾಗುತ್ತದೆ. ಇದಾಗಲೇ ರಾಜ್ಯ ಸರ್ಕಾರದ ಸಕಾರಾತ್ಮಕ ಪ್ರತಿಕ್ರಿಯೆ ಇದಕ್ಕೆ ದೊರಕಿದ್ದು ಕೇಂದ್ರ ಸರ್ಕಾರವು ಅತ್ಯಂತ ಶಿಘ್ರದಲ್ಲಿ ಈ ಘಟಕ ಕಾರ್ಯಾರಂಭ ಮಾಡಲಿದೆ" ಎಂದು ಅವರು ಹೇಳಿದ್ದಾರೆ.
ಆಂದ್ರ ಪ್ರದೇಶದ ವಿಶಾಖಪಟ್ಟಣದಲ್ಲಿ 1.2 ಮಿಲಿಯನ್‌ ಟನ್‌ ಸಾಮರ್ಥ್ಯದ ಕಬ್ಬಿಣದ ಉಂಡೆ ತಯಾರಿ ಘಟಕ ಸ್ಥಾಪನೆಯಾಗಲಿದೆ. ಇದಕ್ಕಾಗಿ ಕೆಐಒಸಿಎಲ್‌ ಆಂದ್ರದ ಆರ್‌ಐಎನ್‌ಎಲ್‌ ಸಂಸ್ಥೆಯೊಡನೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT