ರಾಜ್ಯ

ಬೆಂಗಳೂರು: ಮ್ಯಾನ್ ಹೋಲ್ ಸ್ವಚ್ಛಗೊಳಿಸುತ್ತಿದ್ದ 3 ಕಾರ್ಮಿಕರ ದಾರುಣ ಸಾವು

Vishwanath S
ಬೆಂಗಳೂರು: ನಗರದ ಸೋಮಸಂದ್ರಪಾಳ್ಯ ಮ್ಯಾನ್‌ಹೋಲ್‌ಗೆ ಇಳಿದಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಎನ್ ಡಿ ಸೆಫಲ್ ಅಪಾರ್ಟ್ ಮೆಂಟ್ ಬಳಿಯ ಒಳಚರಂಡಿ ನೀರು ಸಂಸ್ಕರಣಾ ಘಟಕ(ಎಸ್ ಟಿಪಿ)ಕ್ಕೆ ಇಳಿದಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಕೂಡಲೇ ಅಲ್ಲಿಂಗೆ ಬಂದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟು ಮೂವರನ್ನು ಮೇಲಕ್ಕೆ ಎತ್ತಿದರು. ನಂತರ ಅವರನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ರಾವಾನಿಸಲಾಯಿತು. ಮೂವರನ್ನು ಕಾರ್ಮಿಕರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಸ್ಪಷ್ಟಪಡಿಸಿದ್ದಾರೆ. 
ಯಾವುದೇ ಭದ್ರತಾ ಕ್ರಮಗಳನ್ನು ಕೈಗೊಳ್ಳದೇ ಕಾರ್ಮಿಕರನ್ನು ಮ್ಯಾನ್ ಹೋಲ್‌ ಒಳಗೆ ಇಳಿದಿದ್ದಾರೆ. ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
SCROLL FOR NEXT