ಸಾಂದರ್ಭಿಕ ಚಿತ್ರ 
ರಾಜ್ಯ

ಅಕ್ರಮ ಆಸ್ತಿಗಳಿಕೆ: ಎಫ್ಐಆರ್'ಗಳನ್ನು 24 ಗಂಟೆಗಳೊಳಗೆ ವೆಬ್'ಸೈಟ್"ಗೆ ಅಪ್'ಲೋಡ್ ಮಾಡಿ: ಅಧಿಕಾರಿಗಳಿಗೆ ಎಸಿಬಿ

ಲಂಚ ಸ್ವೀಕಾರ ವೇಳೆ ಹಿಡಿಯುವ ಮತ್ತು ಅಕ್ರಮ ಆಸ್ತಿಗಳಿಕೆಯಲ್ಲಿ ದಾಳಿ ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಎಫ್ಐಆರ್'ಗಳನ್ನು 24 ಗಂಟೆಗಳೊಳಗಾಗಿ ವೆಬ್''ಸೈಟ್'ನಲ್ಲಿ ಅಪ್'ಲೋಡ್ ಮಾಡಿ ಎಂದು ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ ಸೂಚನೆ ನೀಡಿದೆ...

ಬೆಂಗಳೂರು: ಲಂಚ ಸ್ವೀಕಾರ ವೇಳೆ ಹಿಡಿಯುವ ಮತ್ತು ಅಕ್ರಮ ಆಸ್ತಿಗಳಿಕೆಯಲ್ಲಿ ದಾಳಿ ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಎಫ್ಐಆರ್'ಗಳನ್ನು 24 ಗಂಟೆಗಳೊಳಗಾಗಿ ವೆಬ್''ಸೈಟ್'ನಲ್ಲಿ ಅಪ್'ಲೋಡ್ ಮಾಡಿ ಎಂದು ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ ಸೂಚನೆ ನೀಡಿದೆ. 
ಭ್ರಷ್ಟಾಚಾರ ನಿಗ್ರಹ ದಳ ಮತ್ತು ಬೆಂಗಳೂರು ಮಹಾನಗರ ಕಾರ್ಯಪಡೆ ದಾಖಲಿಸಿರುವ ಎಫ್ಐಆರ್ ಗಳ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡದಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಎಸ್.ಉಮಾಪತಿ ಎಂಬುವವರು ಈ ಹಿಂದೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 
ಇದರಂತೆ ಅರ್ಜಿಯನ್ನು ನಿನ್ನೆ ವಿಚಾರಣೆ ನಡೆಸಿರುವ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹೆಚ್.ಜಿ.ರಮೇಶ್ ಮತ್ತು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠಕ್ಕೆ ಎಸಿಬಿ ಪರ ವಕೀಲ ವೆಂಕಟೇಶ ದಳವಾಯಿಯವರು ಪ್ರಮಾಣ ಪತ್ರ ಸಲ್ಲಿಸಿದ್ದು, ಲಂಚ ಸ್ವೀಕಾರ ವೇಳೆ ಹಿಡಿಯುವ ಮತ್ತು ಅಕ್ರಮ ಆಸ್ತಿ ಗಳಿಕೆಯಲ್ಲಿ ದಾಳಿ ಪ್ರಕರಣಗಳನ್ನು ಹೊರತು ಪಡಿಸಿ ಇನ್ನೆಲ್ಲಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಎಫ್ಐಆರ್ ಗಳನ್ನು 24 ಗಂಟೆಗಳಲ್ಲಿ ವೆಬ್'ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. 
ಲಂಚ ಸ್ವೀಕಾರ ಸಂದರ್ಭದಲ್ಲಿ ಆರೋಪಿಗಳನ್ನು ಎಸಿಬಿ ಹಿಡಿಯುತ್ತದೆ. ಹಾಗೆಯೇ, ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಆರೋಪಿಗಳ ಮನೆ ಹಾಗೂ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸುತ್ತಾದೆ. ಈ ಎರಡು ಬಗೆಯ ಪ್ರಕರಣಗಳ ಮೇಲೆ ಕ್ರಮ ಕೈಗೊಳ್ಳುವುದಕ್ಕೂ ಮುನ್ನ ಎಫ್ಐಆರ್ ದಾಖಲಿಸಲಾಗುತ್ತದೆ. ಆದರೆ, ಆ ಎಫ್ಐಆರ್ ಗಳನ್ನು 24 ಗಂಟೆಗಳಲ್ಲಿ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗದು, 
ಎಫ್ಐಆರ್ ಗಳನ್ನು ಪ್ರಕಟಿಸಿದ್ದೇ ಆದಲ್ಲಿ ಅದರಲ್ಲಿನ ಅಂಶಗಳು ಬಯಲಾಗಿ ಆರೋಪಿಗಳು ತಪ್ಪಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಹೀಗಾಗಿ ಅದನ್ನು ಹೊರತುಪಡಿಸಿ ಉಳಿದ ಎಲ್ಲಾ ಪ್ರಕರಣಗಳ ಸಂಬಂಧ ದಾಖಲಿಸುವ ಎಫ್ಐಆರ್ ಗಳನ್ನು 24 ಗಂಟೆಗಳಲ್ಲಿ ವೆಬ್'ಸೈಟ್ ನಲ್ಲಿ ಪ್ರಕಟಿಸಲಾಗುವುದು. ಈ ಸಂಬಂಧ ಎಸಿಬಿಯ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಸೂಚನೆ ನೀಡಿ ಸುತ್ತೋಲೆಯನ್ನು ಹೊರಡಿಸಲಾಗುತ್ತದೆ ಎಂದು ದಳವಾಯಿಯವರು ನ್ಯಾಯಾಲಯಕ್ಕೆ ವಿವರಣೆ ನೀಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT