ಕಲಾಸಿಪಾಳ್ಯದ ಕೈಲಾಶ್ ಬಾರ್ ನಲ್ಲಿ ಉಂಟಾದ ಅಗ್ನಿ ಅವಘಡದ ನಂತರ ಸ್ಥಳಕ್ಕೆ ಭೇಟಿ ನೀಡಿದ ಬೆಸ್ಕಾಂ ಮತ್ತು ಪೊಲೀಸ್ ಅಧಿಕಾರಿಗಳು 
ರಾಜ್ಯ

ಅಗ್ನಿಶಾಮಕ ಇಲಾಖೆಯಿಂದ ಎನ್ಒಸಿ ಸಿಗದಿದ್ದರೆ ವ್ಯಾಪಾರ ಪರವಾನಗಿ ಇಲ್ಲ

ಎರಡು ದಿನಗಳ ಹಿಂದೆ ಕೈಲಾಶ್ ಬಾರ್ ಅಂಡ್ ರೆಸ್ಟೊರೆಂಟ್ ನಲ್ಲಿ ಅಗ್ನಿ ....

ಬೆಂಗಳೂರು: ಎರಡು ದಿನಗಳ ಹಿಂದೆ ಕೈಲಾಶ್ ಬಾರ್ ಅಂಡ್ ರೆಸ್ಟೊರೆಂಟ್ ನಲ್ಲಿ ಅಗ್ನಿ ಅವಘಡವುಂಟಾಗಿ 5 ಮಂದಿ ಸಜೀವ ದಹನವಾದ ಘಟನೆಯಿಂದ ಎಚ್ಚೆತ್ತುಕೊಂಡಿರುವ ಅಗ್ನಿ ಮತ್ತು ತುರ್ತು ಸೇವಾ ಇಲಾಖೆ, ಅಗ್ನಿ ಸುರಕ್ಷತಾ ಕ್ರಮ ಅಳವಡಿಸಿ ಪರವಾನಗಿ ಪಡೆದುಕೊಳ್ಳುವವರೆಗೆ ವಾಣಿಜ್ಯ ಮಳಿಗೆಗಳಿಗೆ ವ್ಯಾಪಾರ ಪರವಾನಗಿ ನೀಡದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಶಿಫಾರಸು ಮಾಡಿದೆ.
ಅಗ್ನಿಶಾಮಕ ಸುರಕ್ಷತೆ ಕ್ರಮಗಳನ್ನು ಗಾಳಿಗೆ ತೂರಿ ಬಹುತೇಕ ವಾಣಿಜ್ಯ ಮಳಿಗೆಗಳು ನಗರದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.
ನಗರದಲ್ಲಿ ಇಂತಹ ಅನೇಕ ವಾಣಿಜ್ಯ ಕಟ್ಟಡಗಳು ಅಗ್ನಿಶಾಮಕ ಸುರಕ್ಷತಾ ಕ್ರಮಗಳನ್ನು ಹೊಂದಿಲ್ಲ. ಆದರೂ ಕೂಡ ಬಿಬಿಎಂಪಿಯಿಂದ ವ್ಯಾಪಾರ ಪರವಾನಗಿ ಪಡೆದುಕೊಂಡಿರುತ್ತವೆ. ಇಲ್ಲಿ ಸರಿಯಾದ ನಿಗಾಕ್ರಮ ಇಲ್ಲದಿರುವುದರಿಂದ ಇಂತಹ ಘಟನೆಗಳು ನಡೆಯುತ್ತವೆ. ಹೀಗಾಗಿ ನಾವು ಬಿಬಿಎಂಪಿ ಅಧಿಕಾರಿಗಳಿಗೆ ನೀತಿ ನಿಯಮಗಳಲ್ಲಿ ಬದಲಾವಣೆ ಮಾಡುವಂತೆ ಶಿಫಾರಸು ಮಾಡಿದ್ದೇವೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ ಪೊಲೀಸ್ ಮಹಾ ನಿರ್ದೇಶಕ(ಅಗ್ನಿ ಮತ್ತು ತುರ್ತು ಸೇವೆ ಇಲಾಖೆ)ಯ ಎಂ.ಎನ್.ರೆಡ್ಡಿ, ವ್ಯಾಪಾರ ಪರವಾನಗಿ ನೀಡುವಾಗ ನೀತಿಯಲ್ಲಿ ಕೆಲವು ಬದಲಾವಣೆ ಮಾಡುವಂತೆ ನಾವು ಬಿಬಿಎಂಪಿಗೆ ಶಿಫಾರಸು ಮಾಡಿದ್ದೇವೆ. ವ್ಯಾಪಾರ ಪರವಾನಗಿ ಪಡೆದುಕೊಳ್ಳುವ ಮುನ್ನ ವಾಣಿಜ್ಯ ಮಳಿಗೆಗಳಿಗೆ ಅಗ್ನಿ ಶಾಮಕ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳುವುದನ್ನು ಕಡ್ಡಾಯ ಮಾಡಲಾಗುವುದು ಎಂದು ಹೇಳಿದರು.
ಅಗ್ನಿಶಾಮಕ ಇಲಾಖೆಯಿಂದ ಎನ್ ಒಸಿ(ನೊ ಒಬ್ಜೆಕ್ಷನ್ ಸರ್ಟಿಫಿಕೇಟ್) ಪಡೆಯದೆ ಅತಿ ಎತ್ತರದವರೆಗೆ ಕಟ್ಟಡವನ್ನು ಹೊಂದಿರುವ ಇಂದಿರಾನಗರ ಮತ್ತು ಕೋರಮಂಗಲದ 6 ಕಟ್ಟಡಗಳು ಮತ್ತು 12 ಪಬ್ ಮತ್ತು ಬಾರ್ ಗಳಿಗೆ ಪೊಲೀಸ್ ಇಲಾಖೆ ನೊಟೀಸ್ ಕಳುಹಿಸಿದೆ.
ಇತ್ತೀಚೆಗೆ ಮುಂಬೈಯ ಕಮಲಾ ಮಿಲ್ಸ್ ನಲ್ಲಿ ರೂಫ್ ಟಾಪ್ ಪಬ್ ಮೇಲೆ ನಡೆದ ಅಗ್ನಿ ದುರಂತದ ನಂತರ ಅಗ್ನಿಶಾಮಕ ಇಲಾಖೆ, ಬಿಬಿಎಂಪಿ ಸಹಯೋಗದೊಂದಿಗೆ ಪಬ್ ಮತ್ತು ಬಾರ್ ಗಳ ಅಗ್ನಿ ಸುರಕ್ಷತಾ ಲೆಕ್ಕವರದಿಯನ್ನು ನಡೆಸಿದ್ದು, ಅದರ ಪ್ರಕಾರ ಕಳೆದ ತಿಂಗಳು 30ರಂದು 12 ಪಬ್ ಗಳಿಗೆ ನೊಟೀಸ್ ಜಾರಿ ಮಾಡಿ 15 ದಿನಗಳೊಳಗೆ ಅಗ್ನಿಶಾಮಕ ಸುರಕ್ಷತಾ ಕ್ರಮಗಳನ್ನು ಅಳವಡಿಸುವಂತೆ ಆದೇಶಿಸಲಾಗಿತ್ತು. ನಿಯಮ ಪಾಲಿಸದಿದ್ದಲ್ಲಿ ಪಬ್ ಗಳನ್ನು ಮುಚ್ಚುವುದಾಗಿ ಎಚ್ಚರಿಕೆ ನೀಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT