ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರಯಾಣಿಕರ ಸುರಕ್ಷತೆಗೆ ಖಾಸಗಿ ಸಂಸ್ಥೆ ಜೊತೆ ಕೈ ಜೋಡಿಸಿದ ಕೆಎಸ್ಆರ್ ಟಿಸಿ

ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ನಗರ ಮೂಲದ ತುರ್ತು ಸೇವೆ ಒದಗಿಸುವ ಗೋಲ್ಡನ್ ....

ಬೆಂಗಳೂರು: ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ನಗರ ಮೂಲದ ತುರ್ತು ಸೇವೆ ಒದಗಿಸುವ ಗೋಲ್ಡನ್ ಅವರ್ ಜೊತೆಗೆ ರಾಜ್ಯ ರಸ್ತೆ ಸಾರಿಗೆ ನಿಗಮ ಒಪ್ಪಂದ ಮಾಡಿಕೊಂಡಿದೆ. 
ಇದೊಂದು ಜೀವನವನ್ನೇ ಬದಲಾಯಿಸುವ ಒಪ್ಪಂದವಾಗಿದ್ದು, ಇದರಡಿಯಲ್ಲಿ ಕೆಎಸ್ ಆರ್ ಟಿಸಿ ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಪ್ರಾಥಮಿಕ ಚಿಕಿತ್ಸೆಯ ಕಿಟ್ ಗಳನ್ನು ಇಡಲಿದೆ. ಪ್ರಯಾಣಿಕರ ಜೀವವನ್ನು ಕಾಪಾಡುವ ತಂತ್ರಗಳ ಬಗ್ಗೆ 35 ಸಾವಿರಕ್ಕೂ ಅಧಿಕ ಚಾಲಕರು, ನಿರ್ವಾಹಕರು ಮತ್ತು ತಾಂತ್ರಿಕ ಸಿಬ್ಬಂದಿಗೆ ಗೋಲ್ಡನ್ ಅವರ್ ತರಬೇತಿ ನೀಡಲಿದೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತಿಳಿಸಿದರು.
ಅಮೆರಿಕಾ ಹಾರ್ಟ್ ಅಸೋಸಿಯೇಷನ್ ನಿಗದಿಪಡಿಸಿರುವ ಗುಣಮಟ್ಟಗಳನ್ನು ಗಮನದಲ್ಲಿಟ್ಟುಕೊಂಡು ತೀವ್ರ ನಿಗಾ ತಜ್ಞರು ಬಸ್ಸುಗಳ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ ಎಂದು ಗೋಲ್ಡನ್ ಅವರ್ ಹೇಳಿಕೆಯಲ್ಲಿ ತಿಳಿಸಿದೆ. 
ಈ ಕಾರ್ಯಕ್ರಮದ ವೇಳೆ ಹಲವು ವರ್ಷಗಳವರೆಗೆ ಅಪಘಾತರಹಿತ ಚಾಲನೆ ಮಾಡಿದ ಚಾಲಕರು ಮತ್ತು ಕಂಡಕ್ಟರ್ ಗಳಿಗೆ ಬೆಳ್ಳಿ ಪದಕ ನೀಡಿ ಸನ್ಮಾನಿಸಲಾಯಿತು. 
ಇದೇ ಸಂದರ್ಭದಲ್ಲಿ ಕೆಎಸ್ಆರ್ ಟಿಸಿ ಅಪಘಾತ ಮಾಸ್ ರೆಸ್ಕ್ಯು ವೇಗನ್ ನ್ನು ಘೋಷಿಸಿತು. ಈ ವೇಗನ್ ನ್ನು ಬೆಂಗಳೂರಿನ ಹೆಬ್ಬಾಳ ಬಸ್ ಬೇಯಲ್ಲಿ ಇಡಲಾಗುತ್ತಿದ್ದು, ಸಾವು, ನೋವುಗಳು ಕಂಡುಬಂದಲ್ಲಿ 1062ಗೆ ಕರೆ ಮಾಡಿ ಕಾಲ್ ಸೆಂಟರ್ ಗೆ ತಿಳಿಸಬಹುದು.
ಜನವರಿ 30ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ: ಕೆಎಸ್ಆರ್ ಟಿಸಿಯ ಸಿಬ್ಬಂದಿ ಮತ್ತು ನೌಕರರ ಒಕ್ಕೂಟ, ನೌಕರರ ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ಜನವರಿ 30ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ. ವಿಮಾ ಪ್ರೀಮಿಯಂ ಮತ್ತು ಪ್ರಾವಿಡೆಂಟ್ ಫಂಡ್ ನ್ನು ಸರಿಯಾದ ಸಮಯಕ್ಕೆ ಬಿಡುಗಡೆ ಮಾಡುತ್ತಿಲ್ಲ ಮತ್ತು ಗ್ರಾಟುಟಿ ಪಾವತಿಗಳನ್ನು ಸಾರಿಗೆ ನಿಗಮಗಳು ತಡೆಹಿಡಿಯುತ್ತವೆ ಎಂದು ಒಕ್ಕೂಟ ಸದಸ್ಯರು ಆರೋಪಿಸಿ ಉಪವಾಸ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಆದರೆ ಬಂದ್ ನಡೆಸುವುದಿಲ್ಲ ಎಂದು ಒಕ್ಕೂಟ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT