ಬೆಂಗಳೂರು: ಪತ್ನಿ ಸತ್ತಿದ್ದಾಳೆಂದು ಭಾವಿಸಿ ಪತಿ ಆತ್ಮಹತ್ಯೆ 
ರಾಜ್ಯ

ಬೆಂಗಳೂರು: ಪತ್ನಿ ಸತ್ತಿದ್ದಾಳೆಂದು ಭಾವಿಸಿ ಪತಿ ಆತ್ಮಹತ್ಯೆ

ಪತ್ನಿಯ ಶೀಲ ಶಂಕಿಸಿ ಆಕೆಯನ್ನು ಹತ್ಯೆ ಮಾಡಲು ಪ್ರಯತ್ನಿಸಿದ ಆಟೋ ಚಾಲಕನೊಬ್ಬ ಆಕೆ ಸತ್ತಿದ್ದಾಳೆಂದು ಭಾವಿಸಿ ತಾನೂ ನೇಣಿಗೆ ಶರಣಾದ........

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಆಕೆಯನ್ನು ಹತ್ಯೆ ಮಾಡಲು ಪ್ರಯತ್ನಿಸಿದ ಆಟೋ ಚಾಲಕನೊಬ್ಬ ಆಕೆ ಸತ್ತಿದ್ದಾಳೆಂದು ಭಾವಿಸಿ ತಾನೂ ನೇಣಿಗೆ ಶರಣಾದ ಘಟನೆ ಬೆಂಗಳುರಿನ ರಾಮಮೂರ್ತಿನಗರದಲ್ಲಿ ನಡೆದಿದೆ.
ಆಟೊ ಚಾಲಕ ಹೆನ್ರಿ ಫರ್ನಾಂಡಿಸ್ (37) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು ಪತಿಯಿಂದ ಹಲ್ಲೆಗೊಳಗಾದ ಪತ್ನಿ ಚಿತ್ರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಹತ್ತು ವರ್ಷಗಳ ಹಿಂದೆ ಪ್ರೀತಿಸಿ ವಿಘವಾಗಿದ್ದ ದಂಪತಿಗಳಿಗೆ ಇಬ್ಬರು ಮಕ್ಕಳಿದ್ದಾರೆ. ತನ್ನ ಪತ್ನಿಯ ಶೀಲದ ಬಗೆಗೆ ಶಂಕೆ ವ್ಯಕ್ತಪಡಿಸಿದ್ದ ಹೆನ್ರಿ ಫರ್ನಾಂಡಿಸ್ ಇದೇ ಕಾರಣಕ್ಕೆ ಆಕೆಯೊಡನೆ ಜಗಳವಾಡುತ್ತಿದ್ದ. ನಿತ್ಯದ ಈ ಜಗಳದಿಂದ ಬೇಸತ್ತ ಚಿತ್ರಾ ಕಳೆದ ಹತ್ತು ದಿನದ ಹಿಂದೆ ಮಕ್ಕಳನ್ನು ಕರೆದುಕೊಂಡು ತವರಿಗೆ ತೆರಳಿದ್ದಳು.
ಇದಾಗಿ ಶುಕ್ರವಾರದಂದು ಪತಿ ಹೆನ್ರಿ ಫರ್ನಾಂಡಿಸ್ ಪತ್ನಿಯ ಮನವೊಲಿಸಿ ಪುನಃ ಮನೆಗೆ ಕರೆತಂದಿದ್ದ. ಆದರೆ ಮಕ್ಕಳು ಶಾಲೆಗೆ ತೆರಳಿದ ಬಳಿಕ ದಂಪತಿಗಳ ನಡುವೆ ಪುನಃ ಜಗಳ ಪ್ರಾರಂಭವಾಗಿತ್ತು. ಆಗ ಪತಿ ಹೆನ್ರಿ ಚಿತ್ರಾಳ ಮೇಲೆ ಹಲ್ಲೆ ನಡೆಸಿದ್ದ. ಕತ್ತಿಯಿಂದ ತಲೆ, ಕೈಗಳಿಗೆ ಹೊಡೆದಿದ್ದ. ಆಗ ನೋವು ತಾಳಲಾರದೆ ಚಿತ್ರಾ ಪ್ರಜ್ಞೆ ಕಳೆದುಕೊಂಡು ಬಿದ್ದರು.
ಇದರಿಂದ ಗಾಬರಿಗೊಂಡ ಹೆನ್ರಿ ಪತ್ನಿಯು ಸತ್ತಿದ್ದಾಳೆ ಎಂದು ತಿಳಿದು ತಾನೂ ನೇಣಿಗೆ ಶರಣಾಗಿದ್ದಾನೆ ಎಂದು ಕೆಆರ್ ಪುರಂ ಪೋಲೀಸರು ಮಾಹಿತಿ ನೀಡಿದ್ದಾರೆ. ಚಿತ್ರಾಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಇದೀಗ ಆಕೆ ಅಪಾಅಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದರು. ಕೆಆರ್ ಪುರಂ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT