ಬೃಹತ್ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ 
ರಾಜ್ಯ

ಬೆಂಗಳೂರನ್ನು ದೇಶದ 2ನೇ ರಾಜಧಾನಿಯಾಗಿ ಮಾಡಿ: ಪ್ರಧಾನಿ ಮೋದಿಗೆ ದೇಶಪಾಂಡೆ ಪತ್ರ

ದೇಶಕ್ಕೆ ಎರಡನೇ ರಾಜಧಾನಿಯ ಅಗತ್ಯವಿದ್ದು, ಬೆಂಗಳೂರು ನಗರವನ್ನು ದೇಶದ ಎರಡನೇ ರಾಜಧಾನಿಯನ್ನಾಗಿ ಮಾಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬೃಹತ್ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆಯವರು...

ಬೆಂಗಳೂರು: ದೇಶಕ್ಕೆ ಎರಡನೇ ರಾಜಧಾನಿಯ ಅಗತ್ಯವಿದ್ದು, ಬೆಂಗಳೂರು ನಗರವನ್ನು ದೇಶದ ಎರಡನೇ ರಾಜಧಾನಿಯನ್ನಾಗಿ ಮಾಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬೃಹತ್ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆಯವರು ಶುಕ್ರವಾರ ಪತ್ರ ಬರೆದಿದ್ದಾರೆ. 
ಭಾರತಕ್ಕೆ ತುರ್ತಾಗಿ ಎರಡನೇ ರಾಜಧಾನಿಯ ಅಗತ್ಯವಿದೆ. ಇಂತಹ ಮಹತ್ವದ ಹೊಣೆ ನಿಭಾಯಿಸಲು ಬೆಂಗಳೂರು ಅತ್ಯುತ್ತಮ ನಗರವಾಗಿದೆ. ಭಾರತದಂತಹ ವಿಶಾಲ ರಾಷ್ಟ್ರವನ್ನು ಒಂದು ನಗರದಿಂದ ನಿರ್ವಹಣೆ ಮಾಡಲು ಸಾಧ್ಯವಿಲ್ಲ. ವಿಶೇಷವಾಗಿ ಸರ್ಕಾರವು ಆಡಳಿತ, ರಚನಾತ್ಮಕ ಸುಧಾರಣೆ, ರಾಷ್ಟ್ರ ಮರುನಿರ್ಮಾಣ,, ಅಂತರಾಷ್ಟ್ರೀಯ ಸಹಭಾಗಿತ್ವಕ್ಕೆ ಸಂಬಂಧಿಸಿದಂತೆ ಮಾದರಿಯಾಗಿ ಹಾಗೂ ಅಮೂಲಾಗ್ರ ಬದಲಾವಣೆಗೆ ಸಿದ್ಧತೆ ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಬೆಂಗಳೂರನ್ನು ಎರಡನೇ ರಾಜಧಾನಿಯನ್ನಾಗಿ ಮಾಡುವ ಅಗತ್ಯತೆ ಹೆಚ್ಚಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. 
ರಾಷ್ಟ್ರೀಯ ದೃಷ್ಟಿಕೋನದಲ್ಲಿ ದಕ್ಷಿಣ ಭಾರತದ ಸಕ್ರಿಯ ಪಾಲುದಾರಿಕೆಗೆ ಹೊಸ ರಾಜಧಾನಿಯ ಅಗತ್ಯವಿದೆ. ಸುಪ್ರೀಂಕೋರ್ಟ್'ನ ಎರಡನೇ ಪೀಠ ಸ್ಥಾಪನೆ, ಕೇಂದ್ರ ನಾಗರಿಕ ಸೇವಾ ಆಯೋಗದ ಎರಡನೇ ಕಚೇರಿ ಸ್ಥಾಪನೆ, ಸಂಸತ್ ನ ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲಿ ನಡೆಸುವುದು ಮತ್ತಿತರ ಅಂಶಗಳನ್ನು ಪರಿಗಣಿಸಬಹುದು. 
ದಕ್ಷಿಣ ಭಾರತೀಯರನ್ನು ರಾಜಕೀಯ ಪಾಲುದಾರಿಕೆ ಮತ್ತು ಆಡಳಿತಾತ್ಮಕ ನೀತಿ ರಚನೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಲು ಇದು ಸಕಾರಾತ್ಮಕ ಆರಂಭ ಆಗಬೇಕು ಎಂದು ದೇಶಪಾಂಡೆಯವರು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!