ಗವಿ ಗಂಗಾಧರೇಶ್ವರ ದೇವಸ್ತಾನ 
ರಾಜ್ಯ

ಗವಿ ಗಂಗಾಧರೇಶ್ವರನ ಪಾದ ಸ್ಪರ್ಶಿಸಿದ ಸೂರ್ಯದೇವ!

ಮಕರ ಸಂಕ್ರಮಣದ ದಿನವಾದ ಇಂದು ಸಂಜೆ ಗವಿಪುರಂನ ಗವಿ ಗಂಗಾಧರೇಶ್ವರ ದೇಗುಲದ ಶಿವಲಿಂಗವನ್ನು ಸೂರ್ಯದೇವ ಸ್ಪರ್ಶಿಸಿದ ಅಪೂರ್ವ ಕ್ಷಣವನ್ನು...

ಬೆಂಗಳೂರು: ಮಕರ ಸಂಕ್ರಮಣದ ದಿನವಾದ ಇಂದು ಸಂಜೆ ಗವಿಪುರಂನ ಗವಿ ಗಂಗಾಧರೇಶ್ವರ ದೇಗುಲದ ಶಿವಲಿಂಗವನ್ನು ಸೂರ್ಯದೇವ ಸ್ಪರ್ಶಿಸಿದ ಅಪೂರ್ವ ಕ್ಷಣವನ್ನು ಭಕ್ತರು ಕಣ್ತುಂಬಿಕೊಂಡರು. 
ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಬೆಳಕಿನ ಚಮತ್ಕಾರವೊಂದು ಕಣ್ಣಿಗೆ ಹಬ್ಬವಾಗುತ್ತದೆ. ಶಿವನೂ ಸೂರ್ಯನೂ ಒಂದೇ ಕಡೆ ಮುಖಾಮುಖಿಯಾಗುವ ಅಪೂರ್ವ ಕ್ಷಣ. ಸೂರ್ಯನು ಗಂಗಾಧರನ ಪಾದ ಸ್ಫರ್ಶಿಸಿ ಪಥ ಬದಲಿಸುತ್ತಾನೆ ಎಂಬ ನಂಬಿಕೆ ಭಕ್ತರಲ್ಲಿದೆ.
ಮಕರ ಸಂಕ್ರಾಂತ್ರಿಯ ಮೊದಲು 10 ದಿನ ಸೂರ್ಯ ದಕ್ಷಿಣ ಪಥದಿಂದ ಉತ್ತರ ಪಥಕ್ಕೆ ಚಲಿಸುವ ಎಲ್ಲಾ ಲಕ್ಷಣಗಳು ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಕಾಣಿಸುತ್ತದೆ. ಆದರೆ ಮಕರ ಸಂಕ್ರಾಂತಿಯಂದು ಸೂರ್ಯಸ್ತ ಸಮಯದಲ್ಲಿ ಸೂರ್ಯನ ಕಿರಣಗಳು ದೇವಸ್ಥಾನದ ದಕ್ಷಿಣ ಕಿಟಕಿಯ ಮೂಲಕ ಹಾದು. ನಂದಿಯ ಕೋಡುಗಳ ಮಧ್ಯಭಾಗದಿಂದ ಶಿವನ ಪಾದವನ್ನು ನೇರವಾಗಿ ಸ್ಪರ್ಶಿಸುವ ಮೂಲಕ ಸಂಪೂರ್ಣವಾಗಿ ಪಥ ಬದಲಿಸುವುದನ್ನು ಕಾಣಬಹುದು. 
ಅಪಾರ ಸಂಖ್ಯೆಯಲ್ಲಿ ಭಕ್ತರು ಗವಿ ಗಂಗಾಧರೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆಗಳಲ್ಲಿ ಭಾಗವಹಿಸಿ ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT