ಅಪಘಾತಕ್ಕೀಡಾದ ಕಾರು 
ರಾಜ್ಯ

ಅಡ್ಡಾದಿಡ್ಡಿ ಕಾರು ಚಲಾಯಿಸಿ ಮನೆಗೆ ಡಿಕ್ಕಿ ಹೊಡೆದ ಆಫ್ರಿಕಾ ಪ್ರಜೆ ಸಾವು, ಇಬ್ಬರಿಗೆ ಗಾಯ

ಆಫ್ರಿಕಾದ ಯುವಕನೊಬ್ಬ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿ ಮನೆಯ ಗೋಡೆಗೆ ....

ಬೆಂಗಳೂರು: ಆಫ್ರಿಕಾದ ಯುವಕನೊಬ್ಬ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿ ಮನೆಯ ಗೋಡೆಗೆ ಅಪ್ಪಳಿಸಿ ಕಾರು ಚಾಲಕ ಮೃತಪಟ್ಟು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಘಟನೆ ಇಂದು ಬೆಳಗ್ಗೆ ಬಾಣಸವಾಡಿ ಹತ್ತಿರ ಹೆಣ್ಣೂರು ಮುಖ್ಯ ರಸ್ತೆಯ ಗೆದ್ದಲಹಳ್ಳಿಯಲ್ಲಿ ನಡೆದಿದೆ.
ಚಾಲಕ ಸ್ಥಳದಲ್ಲಿಯೇ ಮೃತಪಟ್ಟರೆ ಆತನ ಮತ್ತಿಬ್ಬರು ಸ್ನೇಹಿತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭೀತಿಗೊಂಡ ಸ್ಥಳೀಯರು ಕೆಲ ಹೊತ್ತು ಪ್ರತಿಭಟನೆ ನಡೆಸಿ ಸುತ್ತಮುತ್ತಲ ಪ್ರದೇಶದಲ್ಲಿ ಆಫ್ರಿಕಾದವರು ಅಡ್ಡಾದಿಡ್ಡಿ ಕಾರು ಚಲಾಯಿಸಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯನ್ನುಂಟುಮಾಡುತ್ತಿದ್ದು ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. 
ಘಟನೆಯಲ್ಲಿ ಮೃತ ಆಫ್ರಿಕಾ ಪ್ರಜೆಯನ್ನು ಅಸಮಿ ಬಾಲಿ ವೆಬ್ (24 ವ) ಎಂದು ಗುರುತಿಸಲಾಗಿದ್ದು, ಗಾಯಗೊಂಡವರು ಆತನ ಸ್ನೇಹಿತರಾದ ಪೀಟ್ರ್ಪಿ, (27) ಮತ್ತು ಬ್ರೂನೋ (32) ಆಗಿದ್ದಾರೆ. ಇವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
ಇವರೆಲ್ಲರೂ ಕಾಂಗೊ ದೇಶದವರಾಗಿದ್ದು ಹೆಣ್ಣೂರಿನಲ್ಲಿ ವಾಸಿಸುತ್ತಿದ್ದರು. 
ಇಂದು ನಸುಕಿನ ಜಾವ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ಮೂವರೂ ಮದ್ಯ ಸೇವಿಸಿ ಮುಂಜಾನೆ ಜಾವ ಮನೆಗೆ ವಾಪಸಾಗುತ್ತಿದ್ದರು. ಮದ್ಯದ ಅಮಲಿನಲ್ಲಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಅಂಗಡಿ ಮತ್ತು ಮನೆಯ ಕಟ್ಟಡಕ್ಕೆ ಹೋಗಿ ಕಾರು ಗುದ್ದಿದೆ. 
ಗಂಭೀರ ಗಾಯಗೊಂಡ ಮೂವರನ್ನು ಹಾದಿಯಲ್ಲಿ ಹೋಗುತ್ತಿದ್ದವರು ಕಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಬಾಲಿ ಅಲ್ಲಿ ಮೃತಪಟ್ಟಿದ್ದಾನೆ. ಮತ್ತಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಬಾಣಸವಾಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ನುಜ್ಜುಗುಜ್ಜಾಗಿರುವ ಕಾರನ್ನು ವಶಪಡಿಸಿಕೊಂಡಿದ್ದಾರೆ.ಗಾಯಗೊಂಡವರು ಮತ್ತು ಸ್ಥಳೀಯರಿಂದ ಪೊಲೀಸರು ಹೆಚ್ಚಿನ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. 
ಅಜಾಗರೂಕತೆಯ ಚಾಲನೆ ಕೇಸನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT