ಸಾಂದರ್ಭಿಕ ಚಿತ್ರ 
ರಾಜ್ಯ

ಬಶೀರ್ ಹತ್ಯೆ ಪ್ರಕರಣ: ಮಂಗಳೂರಿನಲ್ಲಿ ಮತ್ತಿಬ್ಬರ ಬಂಧನ

ಬಶೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ...

ಮಂಗಳೂರು: ಬಶೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ. 
ಕಾಸಾರಗೋಡು ನಿವಾಸಿಗಳಾಗಿರುವ ಲಥೀಶ್ (24), ಪುಷ್ಪರಾಜ್ (23) ಬಂಧಿತ ಆರೋಪಿಗಳಾಗಿದ್ದಾರೆ. 
ಆರೋಪಿಗಳ ಬಂಧನ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಎಸಿಪಿ ವ್ಯಾಲೆಂಟೈನ್ ಡಿಸೋಜಾ ಅವರು, ಲಥೀಶ್ ಹಾಗೂ ಪುಷ್ಪರಾಜ್ ಇಬ್ಬರೂ ಬಶೀರ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಪ್ರಕರಣ ಕುರಿತು ಪೂರ್ಣ ಪ್ರಮಾಣದ ತನಿಖೆ ನಡೆದ ಬಳಿಕವಷ್ಟೇ ಸತ್ಯಾಂಶ ಬಹಿರಂಗಗೊಳ್ಳಲಿದೆ ಎಂದು ಹೇಳಿದ್ದಾರೆ. 
ಈ ಹಿಂದೆ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿತ್ತು. ಇದೀಗ ಮತ್ತಿಬ್ಬರನ್ನು ಬಂಧನಕ್ಕೊಳಪಡಿಸಿರುವ ಹಿನ್ನಲೆಯಲ್ಲಿ ಪ್ರಕರಣ ಸಂಬಂಧ ಒಟ್ಟು ಆರು ಮಂದಿ ಬಂಧನಕ್ಕೊಳಗಾಗಿದ್ದಾರೆ. 
ದೀಪಕ್ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ
ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. 
ಕಾಟಿಪಳ್ಳದ ನಿವಾಸಿಗಳಾಗಿರುವ ಅಬ್ದುಲ್ ಅಜೀಜ್ (42) ಹಾಗೂ ಅಬ್ದುಲ್ ಅಜೀಮ್ (34) ಬಂಧಿತ ಆರೋಪಿಗಳಾಗಿದ್ದಾರೆ. 
ಜ.3 ರಂದು ಕಾಟಿಪಳ್ಳದಲ್ಲಿ ದೀಪಕ್ ರಾವ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ಸಂಬಂಧ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ದುಷ್ಕರ್ಮಿಗಳ ಬೆನ್ನಟ್ಟಿ, ಹತ್ಯೆಯಾದ ದಿನವೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ADR report: ದೇಶದಲ್ಲಿ ಶೇ. 47 ರಷ್ಟು ಸಚಿವರ ಮೇಲೆ ಕ್ರಿಮಿನಲ್ ಆರೋಪ, ಬಿಲಿಯನೇರ್ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ, ಡಿಕೆಶಿ ಎಷ್ಟನೇ ಶ್ರೀಮಂತ?

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ ಡೊನಾಲ್ಡ್ ಟ್ರಂಪ್ ಮಾಹಿತಿ

NIRF ರ‍್ಯಾಂಕಿಂಗ್‌: ಸತತ 7ನೇ ವರ್ಷವೂ ಐಐಟಿ ಮದ್ರಾಸ್ ಗೆ ಅಗ್ರಸ್ಥಾನ; IISc ಬೆಂಗಳೂರಿಗೆ 2ನೇ ಸ್ಥಾನ

SCO Summit 2025: ಬೀಜಿಂಗ್‌, ಮಾಸ್ಕೋ ಮತ್ತು ವಾಷಿಂಗ್ಟನ್‌ ನಡುವೆ ಭಾರತದ ಜಾಗರೂಕ ನಡಿಗೆ (ಜಾಗತಿಕ ಜಗಲಿ)

SCROLL FOR NEXT