ಸಾಂದರ್ಭಿಕ ಚಿತ್ರ 
ರಾಜ್ಯ

ಮಹದಾಯಿ ವಿವಾದ: ಬೆಳಗಾವಿ ಬಸ್ ಸಂಚಾರ ಸ್ಥಗಿತಗೊಳಿಸಿದ ಗೋವಾ ಸರ್ಕಾರ

ಮಹದಾಯಿ ವಿವಾದ ದಿನದಿಂದ ದಿನಕ್ಕೆ ತಾರಕ್ಕೇರುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಗೋವಾ ಸರ್ಕಾರ ಬೆಳಗಾವಿಗೆ ಆಗಮಿಸಬೇಕಿದ್ದ ಬಸ್'ಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ...

ಬೆಳಗಾವಿ: ಮಹದಾಯಿ ವಿವಾದ ದಿನದಿಂದ ದಿನಕ್ಕೆ ತಾರಕ್ಕೇರುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಗೋವಾ ಸರ್ಕಾರ ಬೆಳಗಾವಿಗೆ ಆಗಮಿಸಬೇಕಿದ್ದ ಬಸ್'ಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ. 
ಬೆಳಗಾವಿಯ ಕಣಕುಂಬಿಯಲ್ಲಿ ಮಹದಾಯಿ ಯೋಜನೆ ಕಾಮಗಾರಿ ಪರಿಶೀಲನೆ ನಡೆಸುವ ಸಲುವಾಗಿ ಆಗಮಿಸಿದ್ದ ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಲ್ಯೇಕರ್ ಅವರು, ಕನ್ನಡಿಗರು ಹರಾಮಿಗಳು. ಅವರು ಏನು ಬೇಕಾದರೂ ಮಾಡುತ್ತಾರೆ. ಮಹದಾಯಿ ವಿವಾದವನ್ನು ನ್ಯಾಯಾಧೀಕರಣದಲ್ಲಿ ಬಗೆಹರಿಸಿಕೊಳ್ಳುತ್ತೇವೆ. ಈ ಸಂಬಂಧ ದಾಖಲೆಗಳನ್ನು ನ್ಯಾಯಾಧೀಕರಣಕ್ಕೆ ಸಲ್ಲಿಸುತ್ತೇವೆಂದು ಹೇಳಿಕೆ ನೀಡಿದ್ದರು. 
ಗೋವಾ ಸಚಿವರ ಈ ಹೇಳಿಕೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶಗಳು ವ್ಯಕ್ತವಾಗತೊಡಗಿದವು. ರಾಜಕಾರಣಿಗಳು ಹಾಗೂ ಕನ್ನಡಪರ ಸಂಘಟನೆಗಳು ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತಿವೆ. 
ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗೋವಾ ಸರ್ಕಾರ ರಾಜ್ಯಕ್ಕೆ ಆಗಮಿಸಬೇಕಿದ್ದ ಬಸ್ ಸಂಚಾರಗಳನ್ನು ಅನಧಿಕೃತವಾಗಿ ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ. 
ಬಸ್ ಸಂಚಾರ ಸ್ಥಗಿತ ಹಿನ್ನಲೆಯಲ್ಲಿ ಮಾಹಿತಿ ನೀಡಿರುವ ಬೆಳಗಾವಿ ವಿಭಾಗೀಯ ನಿಯಂತ್ರಕ ಕಚೇರಿ, ಗೋವಾ ಸರ್ಕಾರದೊಂದಿಗೆ ಅಧಿಕೃತವಾಗಿ ಯಾವುದೇ ರೀತಿಯ ಮಾತುಕತೆಗಳು ನಡೆದಿಲ್ಲ. ಆದರೆ, ಬೆಳಗಾವಿಗೆ ಎಂದಿನಂತೆ ಬರುತ್ತಿದ್ದ ಬಸ್ ಗಳು ಸೋಮವಾರ ಬಂದಿಲ್ಲ. ಕರ್ನಾಟಕದ ಕಡೆಯಿಂದ ಯಾವುದೇ ಬೆದರಿಕೆಗಳು ಹಾಗೂ ಅಹಿತಕರ ಘಟನೆಗಳು ಇಲ್ಲದಿದ್ದರೂ ಬಸ್ ಸಂಚಾರ ಸ್ಥಗಿತಗೊಳಿಸಿರುವುದು ಆಶ್ಚರ್ಯವನ್ನು ತಂದಿದೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT