ಮಹದಾಯಿ ನದಿ 
ರಾಜ್ಯ

ಕುಡಿಯುವ ಉದ್ದೇಶಕ್ಕೆ ನೀರು ಬೇಕು ಎಂದು ಕರ್ನಾಟಕ ಸುಳ್ಳು ಹೇಳುತ್ತಿದೆ: ಗೋವಾ ಸರ್ಕಾರ

ಕರ್ನಾಟಕ ಮತ್ತು ಗೋವಾ ನಡುವಿನ ಮಹದಾಯಿ ಬಿಕ್ಕಟ್ಟು ನ್ಯಾಯಾಧಿಕರಣದ ಹೊರಗೆ ಬಗೆಹರಿಯುವ ಸಾಧ್ಯತೆ ಕ್ಷೀಣಿಸಿದ್ದು, ಕರ್ನಾಟಕ ಮಹದಾಯಿ ನೀರು ಕೇಳುತ್ತಿರುವುದು ಕುಡಿಯುವ ಉದ್ದೇಶಕ್ಕಾಗಿ ಅಲ್ಲ....

ಪಣಜಿ: ಕರ್ನಾಟಕ ಮತ್ತು ಗೋವಾ ನಡುವಿನ ಮಹದಾಯಿ ಬಿಕ್ಕಟ್ಟು ನ್ಯಾಯಾಧಿಕರಣದ ಹೊರಗೆ ಬಗೆಹರಿಯುವ ಸಾಧ್ಯತೆ ಕ್ಷೀಣಿಸಿದ್ದು, ಕರ್ನಾಟಕ ಮಹದಾಯಿ ನೀರು ಕೇಳುತ್ತಿರುವುದು ಕುಡಿಯುವ ಉದ್ದೇಶಕ್ಕಾಗಿ ಅಲ್ಲ. ಬದಲಾಗಿ ಕಬ್ಬು ಬೆಳೆಗೆ ಕೇಳುತ್ತಿದೆ ಎಂದು ಗೋವಾ ಸರ್ಕಾರ ಮಹದಾಯಿ ನ್ಯಾಯಾಧಿಕರಣಕ್ಕೆ ತಿಳಿಸಿದೆ.
ಕಳೆದ ವಾರ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು, ಮಹದಾಯಿ ನದಿ ನೀರನ್ನು ಕುಡಿಯು ಉದ್ದೇಶಕ್ಕಾಗಿ ನೆರೆಯ ಕರ್ನಾಟಕದೊಂದಿಗೆ ಹಂಚಿಕೊಳ್ಳಲು ತಾವು ಸಿದ್ಧ ಮತ್ತು ಈ ಸಂಬಂಧ ಮಾತುಕತೆಗೂ ಸಿದ್ಧ ಎಂದಿದ್ದರು.
ಇದರ ಬೆನ್ನಲ್ಲೇ ಗೋವಾ ಪರ ವಕೀಲ ಆತ್ಮಾರಾಮ್‌ ನಾಡಕರ್ಣಿ ಅವರು ಸೋಮವಾರ ಮಹದಾಯಿ ನ್ಯಾಯಾಧಿಕರಣಕ್ಕೆ 531 ಪುಟಗಳ ನಿವೇದನೆಯನ್ನು ಸಲ್ಲಿಸಿದ್ದು, ಕರ್ನಾಟಕದ ಮಹದಾಯಿ ನೀರಿನ ಬೇಡಿಕೆಯು ಕಬ್ಬು ಬೆಳೆಯ ನೀರಾವರಿ ಉದ್ದೇಶಕ್ಕಾಗಿದೆಯೇ ವಿನಾ ಕುಡಿಯುವ ಉದ್ದೇಶಕ್ಕಲ್ಲ ಎಂದು ತಿಳಿಸಿದ್ದಾರೆ.
ಕರ್ನಾಟಕ ಮಹದಾಯಿ ನೀರನ್ನು ಕೇಳುತ್ತಿರುವುದು ಕುಡಿಯುವ ಉದ್ದೇಶಕ್ಕಾಗಿ ಅಲ್ಲ. ಬದಲು ಅತ್ಯಧಿಕ ನೀರನ್ನು ಬೇಡುವ ಕಬ್ಬಿನ ಬೆಳೆಗಾಗಿ. ಹೀಗಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಮಹದಾಯಿ ನದಿ ನೀರನ್ನು ತಿರುಗಿಸಲು ಬಿಡಬಾರದು ಎಂದು ನಾಡಕರ್ಣಿ ಅವರು ಮಹದಾಯಿ ನ್ಯಾಯಾಧಿಕರಣಕ್ಕೆ ಮನವಿ ಮಾಡಿದ್ದಾರೆ. 
ಮಲಪ್ರಭಾ ಜಲಾಶಯದ ನೀರು ಹುಬ್ಬಳ್ಳಿ - ಧಾರವಾಡ ಅವಳಿ ನಗರಗಳ ಕುಡಿಯುವ ನೀರಿಗೆ ಅಗತ್ಯವಾಗಿರುವುದೆಂಬ ಕರ್ನಾಟಕದ ಹೇಳಿಕೆ ಕೂಡ ಸಂಪೂರ್ಣ ಸುಳ್ಳು ಎಂದು ನಾಡಕರ್ಣಿ ತಮ್ಮ ನಿವೇದನೆಯಲ್ಲಿ ವಾದಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT