ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಗೋವಾ ಸಚಿವರ ಹೇಳಿಕೆ ಬಾಲಿಶ, ಬೇಜವಾಬ್ದಾರಿತನದ್ದು: ಸಿಎಂ ಸಿದ್ದರಾಮಯ್ಯ

ಮಹದಾಯಿ ವಿವಾದ ಸಂಬಂಧ ಕನ್ನಡಿಗರನ್ನು ಹರಾಮಿಗಳು ಎಂದು ಹೇಳಿದ್ದ ಗೋವಾ ಜಲಸಂಪನ್ಮೂಲ ಸಚಿವ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಕಿಡಿಕಾರಿದ್ದಾರೆ...

ಬೆಂಗಳೂರು: ಮಹದಾಯಿ ವಿವಾದ ಸಂಬಂಧ ಕನ್ನಡಿಗರನ್ನು ಹರಾಮಿಗಳು ಎಂದು ಹೇಳಿದ್ದ ಗೋವಾ ಜಲಸಂಪನ್ಮೂಲ ಸಚಿವ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಗೋವಾ ಸಚಿವ ವಿನೋದ ಪಾಲ್ಯೇಕರ್ ಅವರು ಕರ್ನಾಟಕದ ವಿರುದ್ಧ ಗಂಭೀರವಾದ ಆರೋಪವನ್ನು ಮಾಡಿದ್ದಾರೆ, ಮಹಾದಾಯಿ ವಿವಾದ ಸಂಬಂಧ ಕರ್ನಾಟಕ ಜನರಿಗೆ ಹಣವನ್ನು ನೀಡುತ್ತಿದೆ ಎಂದು ಹೇಳಿದ್ದಾರೆ. ಈ ರೀತಿಯ ಹೇಳಿಕೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಗೋವಾ ಸಚಿವರು ಬಾಲಿಶ ಹಾಗೂ ಬೇಜವಾಬ್ದಾರಿಯುತವಾಗಿ ಹೇಳಿಕೆಯನ್ನು ನೀಡಿದ್ದಾರೆಂದು ಹೇಳಿದ್ದಾರೆ. 
ಬಳಿಸ ಮಾತನಾಡಿರುವ ಕಾಂಗ್ರೆಸ್ ಸಂಸದ ಬಿಕೆ. ಹರಿಪ್ರಸಾದ್ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಕೇಂದ್ರ ಮೋದಿ ಸರ್ಕಾರ ಮಹದಾಯಿ ವಿವಾದ ಸಂಬಂಧ ಕೀಳು ಮಟ್ಟದ ರಾಜಕೀಯವನ್ನು ಮಾಡುತ್ತಿದೆ. ಮಹದಾಯಿ ವಿವಾದದಲ್ಲಿ ಮೋದಿಯವರು ತಾರತಮ್ಯ ಮಾಡುತ್ತಿದ್ದಾರೆ. ನರ್ಮದಾ ನದಿ ನೀರು ಕುರಿತಂತೆ ಮಧ್ಯಪ್ರದೇಶದಲ್ಲಿ ಮಾಡಿದ ರಾಜಕೀಯವನ್ನು ಮಹದಾಯಿ ವಿಚಾರದಲ್ಲಿ ಪ್ರಧಾನಿ ಮೋದಿ ಮಾಡುತ್ತಿದ್ದಾರೆ. ಮೋದಿ ಸರ್ಕಾರ ಆಸಕ್ತಿ ತೋರಿಸಿದ್ದೇ ಆದರೆ, ವಿವಾದ ಖಂಡಿತವಾಗಿಯೂ ಇತ್ಯರ್ಥಗೊಳ್ಳುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT