ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಗೋವಾ ಸಚಿವರ ಹೇಳಿಕೆ ಬಾಲಿಶ, ಬೇಜವಾಬ್ದಾರಿತನದ್ದು: ಸಿಎಂ ಸಿದ್ದರಾಮಯ್ಯ

ಮಹದಾಯಿ ವಿವಾದ ಸಂಬಂಧ ಕನ್ನಡಿಗರನ್ನು ಹರಾಮಿಗಳು ಎಂದು ಹೇಳಿದ್ದ ಗೋವಾ ಜಲಸಂಪನ್ಮೂಲ ಸಚಿವ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಕಿಡಿಕಾರಿದ್ದಾರೆ...

ಬೆಂಗಳೂರು: ಮಹದಾಯಿ ವಿವಾದ ಸಂಬಂಧ ಕನ್ನಡಿಗರನ್ನು ಹರಾಮಿಗಳು ಎಂದು ಹೇಳಿದ್ದ ಗೋವಾ ಜಲಸಂಪನ್ಮೂಲ ಸಚಿವ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಗೋವಾ ಸಚಿವ ವಿನೋದ ಪಾಲ್ಯೇಕರ್ ಅವರು ಕರ್ನಾಟಕದ ವಿರುದ್ಧ ಗಂಭೀರವಾದ ಆರೋಪವನ್ನು ಮಾಡಿದ್ದಾರೆ, ಮಹಾದಾಯಿ ವಿವಾದ ಸಂಬಂಧ ಕರ್ನಾಟಕ ಜನರಿಗೆ ಹಣವನ್ನು ನೀಡುತ್ತಿದೆ ಎಂದು ಹೇಳಿದ್ದಾರೆ. ಈ ರೀತಿಯ ಹೇಳಿಕೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಗೋವಾ ಸಚಿವರು ಬಾಲಿಶ ಹಾಗೂ ಬೇಜವಾಬ್ದಾರಿಯುತವಾಗಿ ಹೇಳಿಕೆಯನ್ನು ನೀಡಿದ್ದಾರೆಂದು ಹೇಳಿದ್ದಾರೆ. 
ಬಳಿಸ ಮಾತನಾಡಿರುವ ಕಾಂಗ್ರೆಸ್ ಸಂಸದ ಬಿಕೆ. ಹರಿಪ್ರಸಾದ್ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಕೇಂದ್ರ ಮೋದಿ ಸರ್ಕಾರ ಮಹದಾಯಿ ವಿವಾದ ಸಂಬಂಧ ಕೀಳು ಮಟ್ಟದ ರಾಜಕೀಯವನ್ನು ಮಾಡುತ್ತಿದೆ. ಮಹದಾಯಿ ವಿವಾದದಲ್ಲಿ ಮೋದಿಯವರು ತಾರತಮ್ಯ ಮಾಡುತ್ತಿದ್ದಾರೆ. ನರ್ಮದಾ ನದಿ ನೀರು ಕುರಿತಂತೆ ಮಧ್ಯಪ್ರದೇಶದಲ್ಲಿ ಮಾಡಿದ ರಾಜಕೀಯವನ್ನು ಮಹದಾಯಿ ವಿಚಾರದಲ್ಲಿ ಪ್ರಧಾನಿ ಮೋದಿ ಮಾಡುತ್ತಿದ್ದಾರೆ. ಮೋದಿ ಸರ್ಕಾರ ಆಸಕ್ತಿ ತೋರಿಸಿದ್ದೇ ಆದರೆ, ವಿವಾದ ಖಂಡಿತವಾಗಿಯೂ ಇತ್ಯರ್ಥಗೊಳ್ಳುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT