ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ 
ರಾಜ್ಯ

ಬುದ್ದಿಜೀವಿಗಳು ಬರೆದಿದ್ದೆಲ್ಲಾ ಸಾಹಿತ್ಯ, ಗೀಚಿದ್ದೆಲ್ಲಾ ಕಾವ್ಯ: ಸಚಿವ ಅನಂತ್ ಕುಮಾರ್ ಹೆಗ್ಡೆ ಟೀಕೆ

ಸಾಹಿತಿಗಳ ವಿರುದ್ಧ ಮತ್ತೊಮ್ಮೆ ತೀವ್ರವಾಗಿ ಕಿಡಿಕಾರಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆಯವರು, ಸೋ ಕಾಲ್ಡ್ ಬುದ್ದಿ ಜೀವಿಗಳು ಬರೆದಿದ್ದೆಲ್ಲಾ ಸಾಹಿತ್ಯ, ಗೀಚಿದ್ದೆಲ್ಲಾ ಕಾವ್ಯ ಎಂದು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ...

ಬೆಳಗಾವಿ: ಸಾಹಿತಿಗಳ ವಿರುದ್ಧ ಮತ್ತೊಮ್ಮೆ ತೀವ್ರವಾಗಿ ಕಿಡಿಕಾರಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆಯವರು, ಸೋ ಕಾಲ್ಡ್ ಬುದ್ದಿ ಜೀವಿಗಳು ಬರೆದಿದ್ದೆಲ್ಲಾ ಸಾಹಿತ್ಯ, ಗೀಚಿದ್ದೆಲ್ಲಾ ಕಾವ್ಯ ಎಂದು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. 
ಬೆಳಗಾವಿಯ ಕೆ.ಎಲ್.ಇ. ಜೀರಗಿ ಸಭಾಭವನದಲ್ಲಿ ನಿನ್ನೆ ನಡೆದ ಸಮಾರಂಭವೊಂದರಲ್ಲಿ ಮಾತನಾಡಿರುವ ಅವರು, ಸೋ ಕಾಲ್ಡ್ ಬುದ್ಧಿ ಜೀವಿಗಳು ಬರೆದಿದ್ದೆಲ್ಲಾ ಸಾಹಿತ್ಯ, ಗೀಚಿದ್ದೆಲ್ಲಾ ಕಾವ್ಯವಾಗಿರುತ್ತದೆ. ಸಾಹಿತಿಗಳ ಬರವಣಿಗೆಗೆ ಅರ್ಥವೂ ಇರುವುದಿಲ್ಲ, ತಲೆಬುಡವೂ ಇರುವುದಿಲ್ಲ. ಅವರಿಗೆ ಯಾವುದೋ ಸರ್ಕಾರಿ ನಿವೇಶನ ಬೇಕಾಗಿರುತ್ತದೆ. ಅದಕ್ಕಾಗಿ ವಿಚಾರವಾದಿಗಳ ಪಟ್ಟ ಕಟ್ಟಿಕೊಂಡಿರುತ್ತಾರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. 
ನಾವು ಏನಾಗಬೇಕೆಂದು ಕೇಳಿದಾಗ ಬುದ್ದಿ ಜೀವಿಗಳು ಮೊದಲು ಮಾನವರಾಗಬೇಕೆಂದು ಹೇಳುತ್ತಾರೆ, ಹಾಗಾದರೆ, ನಾವು ದನನಾ...? ನಾವು ಪ್ರಾಣಿಗಳ ಥರ ಇದ್ದೀವಾ...? ಮನುಷ್ಯರಾಗಿ ಹುಟ್ಟಿದ ಮೇಲೆ ಮತ್ತೆ ಮನುಷ್ಯರಾಗುವುದರಲ್ಲಿ ವಿಶೇಷ ಏನಿದೆ...? ಅವರಿಗೆ ದೃಷ್ಟಿದೋಷವಿರಬೇಕು. 
ಸಂಸ್ಕೃತದಲ್ಲಿ ಶ್ಲೋಕವೊಂದಿಗೆ. ಮನುಷ್ಯರಾಗಿ ಹುಟ್ಟಿದವರು ದೇವರಾಗಲು ಪ್ರಯತ್ನಿಸಬೇಕೆಂದು. ನಾವೆಲ್ಲರೂ ದೇವರಾಗಲು ಪ್ರಯತ್ನಿಸಬೇಕು. ಸರ್ಕಾರದಿಂದ ನಿವೇಶನ ಪಡೆದುಕೊಳ್ಳಲು ಕೆಲವು ಸಾಹಿತಿ ಎನ್ನುವ ಪಟ್ಟ ಕಟ್ಟಿಕೊಂಡಿದ್ದಾರೆ. ಬರೆದಿದ್ದೇ ಸಾಹಿತ್ಯ, ಗೀಚಿದ್ದೇ ಕವಿತೆ ಎನ್ನುವಂತಾಗಿದೆ ಇಂದಿನ ಪರಿಸ್ಥಿತಿ. ಅದಕ್ಕೆ ಯಾವ ಅರ್ಥವೂ ಇರುವುದಿಲ್ಲ, ತಲೆ ಬುಡವೂ ಇರುವುದಿಲ್ಲ ಎಂದು ಟೀಕಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT