ಅಪಘಾತಕ್ಕೀಡಾದ ಶಾಲಾ ವಾಹನ 
ರಾಜ್ಯ

ಅಥಣಿ: ಶಾಲಾ ವಾಹನ-ಬೈಕ್ ನಡುವೆ ಭೀಕರ ಅಪಘಾತ, 3 ಬೈಕ್ ಸವಾರರು ಸಾವು

ಶಾಲಾ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ.

ಅಥಣಿ: ಶಾಲಾ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಖೋತನಟ್ಟಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು ಶಾಲಾ ವಾಹನದಲ್ಲಿದ್ದ 20ಕ್ಕೂ ಹೆಚ್ಚಿನ ಸಂಖ್ಯೆಯ ಮಕ್ಕಳಿಗೆ ಗಾಯಗಳಾಗಿದೆ.
ಅಥಣಿಯ ಯಲ್ಲಡಗಿ ಗ್ರಾಮದ ನಿವಾಸಿಗಳಾದ ಮನೋಜ್ ದೊಡ್ಡಮನಿ (32), ದಾನಪ್ಪ ಮಗದುಮ್ (45) ಹಾಗೂ ಅಪ್ಪಾಸಾಬ್ ಮರಾಠೆ ಮೃತಪಟ್ಟ ದುರ್ದೈವಿಗಳು. ಇವರಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ಬೈಕ್‌  ಸವಾರ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗದ ನಡುವೆ ಅಸುನೀಗಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿದ್ದ ಶಾಲಾ ವಿದ್ಯಾರ್ಥಿಗಳನ್ನು  ಅಥಣಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲಾ ವಾಹನದಲ್ಲಿದ್ದ ವಿದ್ಯಾರ್ಥಿಗಳು ಐಗಳಿ ಕ್ರಾಸ್ ಮಾಣಿಕ ಪ್ರಭು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರೆಂದು ತಿಳಿದು ಬಂದಿದ್ದು ಐಗಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT