ಪುನೀತ್ ರಾಜಕುಮಾರ್, ಯಶ್ 
ರಾಜ್ಯ

ವಾಹನ ವಿರಳ ಸಂಚಾರ ದಿನಕ್ಕೆ ಪುನೀತ್, ಯಶ್ ಪ್ರಚಾರ

ಫೆಬ್ರವರಿಯಿಂದ ಪ್ರತಿ ತಿಂಗಳ ಎರಡನೇ ಭಾನುವಾರ ಬೆಂಗಳೂರಿನಲ್ಲಿ 'ವಾಹನ ವಿರಳ ಸಂಚಾರ ದಿನ' ವಾಗಿ(ಲೇಸ್ ಟ್ರಾಫಿಕ್ ಡೇ) ಆಚರಿಸಲು ರಾಜ್ಯ ಸರ್ಕಾರ...

ಬೆಂಗಳೂರು: ಫೆಬ್ರವರಿಯಿಂದ ಪ್ರತಿ ತಿಂಗಳ ಎರಡನೇ ಭಾನುವಾರ ಬೆಂಗಳೂರಿನಲ್ಲಿ 'ವಾಹನ ವಿರಳ ಸಂಚಾರ ದಿನ' ವಾಗಿ(ಲೇಸ್ ಟ್ರಾಫಿಕ್ ಡೇ) ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಕನ್ನಡದ ಖ್ಯಾತ ನಟರಾದ ಪುನೀತ್ ರಾಜಕುಮಾರ್ ಮತ್ತು ರಾಕಿಂಗ್ ಸ್ಟಾರ್ ಯಶ್ ಈ ಬಗ್ಗೆ ಪ್ರಚಾರ ನಡೆಸಲಿದ್ದಾರೆ. 
ನಗರದ ಪರಿಸರ ರಕ್ಷಣೆ ಮತ್ತು ಸಾರ್ವಜನಿಕ ಸಾರಿಗೆ ಉತ್ತೇಜಿಸುವುದಕ್ಕಾಗಿ ಪ್ರತಿ ತಿಂಗಳು ಎರಡನೇ ಭಾನುವಾರದಂದು ವಾಹನ ವಿರಳ ಸಂಚಾರ ದಿನವನ್ನು ಆಚರಿಸಲು ಸಾರಿಗೆ ಸಚಿವಾಲಯ ತೀರ್ಮಾನಿಸಿದೆ. ಅಂತೆ ಇದನ್ನು ಹೆಚ್ಚು ಜನಪ್ರಿಯಗೊಳಿಸುವ ಸಲುವಾಗಿ ಪುನೀತ್ ರಾಜಕುಮಾರ್ ಮತ್ತು ಯಶ್ ರನ್ನು ಬಳಸಿಕೊಳ್ಳಲು ಸಚಿವಾಲಯ ಆಯ್ಕೆ ಮಾಡಿದ್ದು ಟಿಪಿಕಪ್ ಹಾಡುಗಳ ಮೂಲಕ ಗಮನ ಸೆಳೆದಿರುವ ಯೋಗರಾಜ್ ಭಟ್ ಈ ಕುರಿತು ಜಾಗೃತಗೊಳಿಸುವ ಹಾಡೊಂದನ್ನು ಬರೆಯಲಿದ್ದಾರೆ. 
ಬೃಹತ್ ಬೆಂಗಳೂರು ಮಹಾನಗರ ಪಾರಿಕೆ, ಬೆಂಗಳೂರು ಮೆಟ್ರೋ ರೈಲು ನಿಗಮ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಸೇರಿ ಸಭೆ ನಡೆಸಿ ಆಚರಣೆಯ ಸಮಾರಂಭದ ಉದ್ಘಾಟನಾ ದಿನಾಂಕವನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು. ನಂತರ ಫೆಬ್ರವರಿಯಿಂದ ಈ ಆಚರಣೆ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ಎಚ್ಎಂ ರೇವಣ್ಣ ಹೇಳಿದ್ದಾರೆ. 
ಸಾರಿಗೆ ಸಚಿವಾಲಯದ ಈ ಆಚರಣೆಗೆ ಸ್ಥಳೀಯ ನಿವಾಸಿ ಕಲ್ಯಾಣ ಸಂಘಗಳು ಬೆಂಬಲ ಸೂಚಿಸಿವೆ. ನಗರದ ಐಟಿ-ಬಿಟಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಟೆಕ್ಕಿಗಳು ಸಹ ವಾಹನ ವಿರಳ ಸಂಚಾರ ದಿನ ಆಚರಣೆಯಲ್ಲಿ ಪಾಲ್ಗೋಳ್ಳಲಿದ್ದಾರೆ. ಇನ್ನು ಇದಕ್ಕಾಗಿ 75ಕ್ಕೂ ಹೆಚ್ಚು ವೋಲ್ವಾ ಬಸ್ ಗಳು ಬಿಎಂಟಿಸಿಗೆ ಸೇರ್ಪಡೆಗೊಂಡಿವೆ ಎಂದು ರೇವಣ್ಣ ಹೇಳಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ

E20 ಪೆಟ್ರೋಲ್ ನಲ್ಲಿ ಹೆಚ್ಚು ಕ್ಲೋರೈಡ್ ಮಟ್ಟ ತೋರಿಸಿದ್ದ SIAM; ಸಚಿವಾಲಯಕ್ಕೆ ಕಳುಹಿಸಿದ್ದ ಪತ್ರ ವಾಪಸ್

"ಜನ ನಾಯಗನ್ ಬಜೆಟ್': ಮಹಿಳೆಯರು, ಯುವಜನತೆಗೆ ದಳಪತಿ ವಿಜಯ್ ಬಂಪರ್ ಗಿಫ್ಟ್; ಶಾಲಾ ಶಿಕ್ಷಣಕ್ಕೆ ಅತಿ ಹೆಚ್ಚು ಅನುದಾನ