ಹಳದಿ, ಬಿಳಿ, ಕೆಂಪು ಬಣ್ಣದೊಂದಿಗೆ ಸಿದ್ಧಗೊಂಡ ನಾಡಧ್ವಜ 
ರಾಜ್ಯ

ಹಳದಿ, ಬಿಳಿ, ಕೆಂಪು ಬಣ್ಣದೊಂದಿಗೆ ಸಿದ್ಧಗೊಂಡ ನಾಡಧ್ವಜ

ರಾಜ್ಯಕ್ಕೆ ಪ್ರತ್ಯೇಕ ಧ್ವಜ ರೂಪಿಸುವ ಸಲುವಾಗಿ ಸರ್ಕಾರ ರಚಿಸಿರುವ ಧ್ವಜ ಸಮಿತಿಯು ನಾಡಧ್ವಜ ವಿನ್ಯಾಸಗೊಳಿಸಿದ್ದು, ಹಳದಿ, ಬಿಳಿ ಹಾಗೂ ಕೆಂಪು ಬಣ್ಣಗಳನ್ನೊಂಡ ನಾಡಧ್ವಜವನ್ನು ಅಂತಿಮಗೊಳಿಸಿದೆ ಎಂದು ಹೇಳಲಾಗುತ್ತಿದೆ...

ಬೆಂಗಳೂರು: ರಾಜ್ಯಕ್ಕೆ ಪ್ರತ್ಯೇಕ ಧ್ವಜ ರೂಪಿಸುವ ಸಲುವಾಗಿ ಸರ್ಕಾರ ರಚಿಸಿರುವ ಧ್ವಜ ಸಮಿತಿಯು ನಾಡಧ್ವಜ ವಿನ್ಯಾಸಗೊಳಿಸಿದ್ದು, ಹಳದಿ, ಬಿಳಿ ಹಾಗೂ ಕೆಂಪು ಬಣ್ಣಗಳನ್ನೊಂಡ ನಾಡಧ್ವಜವನ್ನು ಅಂತಿಮಗೊಳಿಸಿದೆ ಎಂದು ಹೇಳಲಾಗುತ್ತಿದೆ. 
ರಾಜ್ಯಕ್ಕೆ ಪ್ರತ್ಯೇಕ ಧ್ವಜದ ಕಾನೂನಿನ ಅಂಶಗಳ ಪರಿಶೀಲನೆ ಮತ್ತು ಧ್ವಜ ವಿನ್ಯಾಸ ಅಂತಿಮ ಮಾಡುವ ಸಲುವಾಗಿ ಜುಲೈನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಚಕ್ರವರ್ತಿ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಸರ್ಕಾರ ರಚನೆ ಮಾಡಿತ್ತು. ಈ ಸಮಿತಿಯು ಸತತ ಸಭೆಗಳನ್ನು ನಡೆದಿ ಧ್ವಜದ ಮಾದರಿಯನ್ನು ಅಂತಮಗೊಳಿಸಿದೆ. 
ಸಮಿತಿ ವಿನ್ಯಾಸಗೊಳಿಸಿರುವ ನಾಡಧ್ವಜವು ಹಳದಿ, ಬಿಳಿ ಹಾಗೂ ಕೆಂಪುಗಳನ್ನೊಳಗೊಂಡಿದ್ದು, ಬಿಳಿ ಬಣ್ಣದ ಮಧ್ಯದಲ್ಲಿ ಕರ್ನಾಟಕ ಸರ್ಕಾರದ ಲಾಂಛನ ಮುದ್ರೆ ಗಂಡಬೇರುಂಡ ಇರಲಿದೆ. 
ನಾಡಧ್ವಜವನ್ನು ವಿನ್ಯಾಸಗೊಳಿಸಿರುವ ಸಮಿತಿಯು ಸೋಮವಾರ ಅಂತಿಮ ಸಭೆಯನ್ನು ನಡೆಸಲಿದ್ದು, ಬಳಿಕ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದೆ, ಬಳಿಕ ಸಚಿವರ ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ನಡೆಸಿ ಸಚಿವ ಸಂಪುಟದ ಮುಂದೆ ಮಂಡನೆ ಮಾಡಿ ಒಪ್ಪಿಗೆ ಪಡೆದು ಬಳಿಕ ಕೇಂದ್ರ ಸರ್ಕಾರದ ಅನುಮತಿಗೆ ರವಾನಿಸುತ್ತದೆ ಎಂದು ತಿಳಿದುಬಂದಿದೆ. 
ಧ್ವಜ ಸಮಿತಿಯು ಬುಧವಾರ ಸಭೆಯನ್ನು ನಡೆಸಿದ್ದು, ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಪ್ರತ್ಯೇಕ ಧ್ವಜ ಹೊಂದಲು ಯಾವುದೇ ರೀತಿಯ ಕಾನೂನು ಸಮಸ್ಯೆಗಳು ಎದುರಾಗುವುದಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆಯಷ್ಟೇ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT