ಹಳದಿ, ಬಿಳಿ, ಕೆಂಪು ಬಣ್ಣದೊಂದಿಗೆ ಸಿದ್ಧಗೊಂಡ ನಾಡಧ್ವಜ 
ರಾಜ್ಯ

ಹಳದಿ, ಬಿಳಿ, ಕೆಂಪು ಬಣ್ಣದೊಂದಿಗೆ ಸಿದ್ಧಗೊಂಡ ನಾಡಧ್ವಜ

ರಾಜ್ಯಕ್ಕೆ ಪ್ರತ್ಯೇಕ ಧ್ವಜ ರೂಪಿಸುವ ಸಲುವಾಗಿ ಸರ್ಕಾರ ರಚಿಸಿರುವ ಧ್ವಜ ಸಮಿತಿಯು ನಾಡಧ್ವಜ ವಿನ್ಯಾಸಗೊಳಿಸಿದ್ದು, ಹಳದಿ, ಬಿಳಿ ಹಾಗೂ ಕೆಂಪು ಬಣ್ಣಗಳನ್ನೊಂಡ ನಾಡಧ್ವಜವನ್ನು ಅಂತಿಮಗೊಳಿಸಿದೆ ಎಂದು ಹೇಳಲಾಗುತ್ತಿದೆ...

ಬೆಂಗಳೂರು: ರಾಜ್ಯಕ್ಕೆ ಪ್ರತ್ಯೇಕ ಧ್ವಜ ರೂಪಿಸುವ ಸಲುವಾಗಿ ಸರ್ಕಾರ ರಚಿಸಿರುವ ಧ್ವಜ ಸಮಿತಿಯು ನಾಡಧ್ವಜ ವಿನ್ಯಾಸಗೊಳಿಸಿದ್ದು, ಹಳದಿ, ಬಿಳಿ ಹಾಗೂ ಕೆಂಪು ಬಣ್ಣಗಳನ್ನೊಂಡ ನಾಡಧ್ವಜವನ್ನು ಅಂತಿಮಗೊಳಿಸಿದೆ ಎಂದು ಹೇಳಲಾಗುತ್ತಿದೆ. 
ರಾಜ್ಯಕ್ಕೆ ಪ್ರತ್ಯೇಕ ಧ್ವಜದ ಕಾನೂನಿನ ಅಂಶಗಳ ಪರಿಶೀಲನೆ ಮತ್ತು ಧ್ವಜ ವಿನ್ಯಾಸ ಅಂತಿಮ ಮಾಡುವ ಸಲುವಾಗಿ ಜುಲೈನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಚಕ್ರವರ್ತಿ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಸರ್ಕಾರ ರಚನೆ ಮಾಡಿತ್ತು. ಈ ಸಮಿತಿಯು ಸತತ ಸಭೆಗಳನ್ನು ನಡೆದಿ ಧ್ವಜದ ಮಾದರಿಯನ್ನು ಅಂತಮಗೊಳಿಸಿದೆ. 
ಸಮಿತಿ ವಿನ್ಯಾಸಗೊಳಿಸಿರುವ ನಾಡಧ್ವಜವು ಹಳದಿ, ಬಿಳಿ ಹಾಗೂ ಕೆಂಪುಗಳನ್ನೊಳಗೊಂಡಿದ್ದು, ಬಿಳಿ ಬಣ್ಣದ ಮಧ್ಯದಲ್ಲಿ ಕರ್ನಾಟಕ ಸರ್ಕಾರದ ಲಾಂಛನ ಮುದ್ರೆ ಗಂಡಬೇರುಂಡ ಇರಲಿದೆ. 
ನಾಡಧ್ವಜವನ್ನು ವಿನ್ಯಾಸಗೊಳಿಸಿರುವ ಸಮಿತಿಯು ಸೋಮವಾರ ಅಂತಿಮ ಸಭೆಯನ್ನು ನಡೆಸಲಿದ್ದು, ಬಳಿಕ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದೆ, ಬಳಿಕ ಸಚಿವರ ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ನಡೆಸಿ ಸಚಿವ ಸಂಪುಟದ ಮುಂದೆ ಮಂಡನೆ ಮಾಡಿ ಒಪ್ಪಿಗೆ ಪಡೆದು ಬಳಿಕ ಕೇಂದ್ರ ಸರ್ಕಾರದ ಅನುಮತಿಗೆ ರವಾನಿಸುತ್ತದೆ ಎಂದು ತಿಳಿದುಬಂದಿದೆ. 
ಧ್ವಜ ಸಮಿತಿಯು ಬುಧವಾರ ಸಭೆಯನ್ನು ನಡೆಸಿದ್ದು, ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಪ್ರತ್ಯೇಕ ಧ್ವಜ ಹೊಂದಲು ಯಾವುದೇ ರೀತಿಯ ಕಾನೂನು ಸಮಸ್ಯೆಗಳು ಎದುರಾಗುವುದಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆಯಷ್ಟೇ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Indian Stock Market: ರಕ್ತಾಪಾತ.. ಒಂದೇ ಗಂಟೆಯಲ್ಲಿ ಹೂಡಿಕೆದಾರರಿಗೆ 7,60,00,00,00,000 ನಷ್ಟ!

ಯುದ್ಧ ನಮ್ಮದಲ್ಲ: ಶಶಿತರೂರ್ ಬಳಿಕ ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ

ಭಾರತ- ಪಾಕಿಸ್ತಾನದ ಸಂಘರ್ಷ ಅಣ್ವಸ್ತ್ರದ ಅಪಾಯದಲ್ಲೇ ಇದೆ, ಪಾಕ್ ನಿಂದ ನಮಗೂ ಅಪಾಯ ತಪ್ಪಿದ್ದಲ್ಲ: ಅಮೆರಿಕ

ಸಮುದ್ರದಲ್ಲೇ ಬಿಗ್ ಡೀಲ್‌: ಚೀನಾದತ್ತ ಹೊರಟಿದ್ದ ರಷ್ಯಾದ ತೈಲ ನೌಕೆ ಭಾರತಕ್ಕೆ ಯು-ಟರ್ನ್!

ಪ್ರತಿ ವ್ಯಕ್ತಿ ತನ್ನ ಜೀವನದಲ್ಲಿ ಏನಾಗುತ್ತಿದೆ ಎಂದು ಎಲ್ಲರಿಗೂ ಹೇಳಲು ಬಯಸುವುದಿಲ್ಲ": ವಿವಾಹ ವದಂತಿಗೆ ಬಗ್ಗೆ ನಟಿ ಅನುಷ್ಕಾ ಶೆಟ್ಟಿ ಪ್ರತಿಕ್ರಿಯೆ...

SCROLL FOR NEXT