ರಕ್ತದಲ್ಲಿ ಬರೆದ ಪತ್ರ 
ರಾಜ್ಯ

ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಪ್ರಧಾನಿ, ಸಿಎಂಗೆ ರಕ್ತದಲ್ಲಿ ಪತ್ರ ಬರೆದ ಐವರು ಸ್ವಾಮೀಜಿಗಳು

ಗೋಹತ್ಯೆ ನಿಷೇಧಿಸುವಂತೆ ಹಾಗೂ ದೇಸಿ ತಳಿಯ ಗೋವುಗಳನ್ನು ರಕ್ಷಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲೆಯ ಐವರು ಸ್ವಾಮೀಜಿಗಳು....

ಮೈಸೂರು: ಗೋಹತ್ಯೆ ನಿಷೇಧಿಸುವಂತೆ ಹಾಗೂ ದೇಸಿ ತಳಿಯ ಗೋವುಗಳನ್ನು ರಕ್ಷಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲೆಯ ಐವರು ಸ್ವಾಮೀಜಿಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಇಂದು ಮೈಸೂರಿನ ಅಗ್ರಹಾರದ ಹೊಸಮಠದಲ್ಲಿ ಭಾರತೀಯ ಗೋ ಪರಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಐವರು ಸ್ವಾಮೀಜಿಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಗೋ ಹತ್ಯೆ ನಿಷೇಧಕ್ಕೆ ಆಗ್ರಹಿಸಿ ಹೊಸಮಠದ ಚಿದಾನಂದ ಸ್ವಾಮೀಜಿ, ಮೇಲುಕೋಟೆಯ ಇಳೈ ಆಳ್ವಾರ್ ಸ್ವಾಮೀಜಿ, ನೀಲಕಂಠ ಮಠದ ಸಿದ್ದಮಲ್ಲ ಸ್ವಾಮೀಜಿ, ಸವಿತಾ ಸಮಾಜದ ಶ್ರೀಕರ ಬಸವಾನಂದ ಸ್ವಾಮೀಜಿ, ತ್ರಿಪುರ ಭೈರವಿ ಮಠದ ಕೃಷ್ಣ ಮೋಹನಾನಂದ ಗಿರಿ ಗೋಸ್ವಾಮಿ ಅವರು ರಕ್ತದಲ್ಲಿ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!