ಸಂತಾನ ಹರಣ ಚಿಕಿತ್ಸೆ ಸಂಬಂಧ ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕ: ಸಂತಾನಹರಣ ಶಸ್ತ್ರಚಿಕಿತ್ಸೆಗೆ ಪುರುಷರ ನಿರಾಸಕ್ತಿ

ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನವೆಂಬರ್ 21ರಿಂದ ಡಿಸೆಂಬರ್ ನಾಲ್ಕರವರೆಗೂ ಎರಡು ಹಂತಗಳಲ್ಲಿ ಸಂತಾನಹರಣ ಚಿಕಿತ್ಸೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗಿದೆ

ಬೆಂಗಳೂರು : ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನವೆಂಬರ್ 21ರಿಂದ ಡಿಸೆಂಬರ್ ನಾಲ್ಕರವರೆಗೂ ಎರಡು ಹಂತಗಳಲ್ಲಿ  ಸಂತಾನಹರಣ ಚಿಕಿತ್ಸೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದು, ಕರ್ನಾಟಕದಲ್ಲಿ ಕೇವಲ 306 ಪುರುಷರು ಮಾತ್ರ ಸಂತನಾಹರಣ ಚಿಕಿತ್ಸೆಗೆ ಹೆಸರು ನೋಂದಾಯಿಸಿದ್ದಾರೆ.

 ಚಿಕ್ಕಮಗಳೂರು, ಹಾವೇರಿ, ರಾಮನಗರ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಯಾವೊಬ್ಬ ಪುರುಷರು ಇಂತಹ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಮುಂದಾಗಿಲ್ಲ . ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿಯಲ್ಲಿ ಈ ವಿಷಯ ಬಹಿರಂಗಗೊಂಡಿದೆ.

2015-16 ರ ರಾಷ್ಟ್ರೀಯ ಆರೋಗ್ಯ  ಸಮೀಕ್ಷೆಯಂತೆ ರಾಷ್ಟ್ರಮಟ್ಟದಲ್ಲಿ ಶೇಕಡ 0.3 ರಷ್ಟು ಪುರುಷರು , ಕರ್ನಾಟಕ ರಾಜ್ಯದಲ್ಲಿ ಶೇಕಡ 0.1 ರಷ್ಟು ಮಂದಿ ಪುರುಷರು  ಮಾತ್ರ ಶಸ್ತ್ತ ಚಿಕಿತ್ಸೆ ಮಾಡಿಸಿಕೊಳ್ಳಲು ಆಸಕ್ತಿ ಹೊಂದಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.

ಮಹಿಳೆಯರಲ್ಲಿ ರಾಷ್ಟ್ರಮಟ್ಟದಲ್ಲಿ ಅಂದಾಜು ಶೇಕಡಾ 36 ರಷ್ಟು ಮಂದಿ ಶಸ್ತ್ತ ಚಿಕಿತ್ಸೆಗೆ ಆಸಕ್ತಿ ತಾಳಿದರೆ, ಕರ್ನಾಟಕದಲ್ಲಿ ಶೇಕಡಾ 48. 6ರಷ್ಟು ಮಹಿಳೆಯರು ಇಂತಹ ಚಿಕಿತ್ಸೆಗೆ ಮುಂದಾಗುತ್ತಿರುವ ಸಂಗತಿ ಹೊರಬಿದ್ದಿದೆ. ಕುಟುಂಬ ನಿಯಂತ್ರಣ ಯೋಜನೆಯಲ್ಲಿ ಪುರುಷರ ಪಾಲ್ಗೊಳ್ಳುವಿಕೆ ಕುರಿತಂತೆ ಜನಜಾಗೃತಿ ಮೂಡಿಸಬೇಕಾಗಿದೆ. ಇಂತಹ ಕಾರ್ಯಕ್ರಮಗಳು ಯಶಸ್ವಿಗೊಳ್ಳಲು ಪುರುಷರ ಪಾತ್ರ ಮಹತ್ವದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸಂತಾನಹರಣ ಶಸ್ತ್ರ ಚಿಕಿತ್ಸೆಯಲ್ಲಿ ರಾಜ್ಯದ ಸಾಧನೆ ಉತ್ತಮವಾಗಿದೆ. ಆದರೆ, ವಿಶ್ವದಾದ್ಯಂತ ಪುರುಷರ ಸಂತಾನಹರಣ ಶಸ್ತ್ರ ಚಿಕಿತ್ಸೆ ಪ್ರಮಾಣಕ್ಕೆ ಹೋಲಿಸಿದ್ದರೆ ಕಡಿಮೆಯಾಗಿದೆ ಎಂದು ಅಂತಾರಾಷ್ಟ್ರೀಯ ಪ್ರಸೂತಿ ಮತ್ತು ಸ್ತ್ರಿ ರೋಗ ತಜ್ಞ  ಒಕ್ಕೂಟದ ರಾಯಬಾರಿ ಡಾ. ಹೇಮಾ ದಿವಾಕರ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT