ಶಾಲೆಗೆ ಭದ್ರತೆ, ನೀರು ತಂದ ಲೋಕಾಯುಕ್ತ ಪೊಲೀಸ್ ಭೇಟಿ! 
ರಾಜ್ಯ

ಶಾಲೆಗೆ ಭದ್ರತೆ, ನೀರು ತಂದ ಲೋಕಾಯುಕ್ತ ಪೊಲೀಸ್ ಭೇಟಿ!

ಅಧಿಕಾರಿಗಳು ಸಂವೇದನಾಶೀಲರಾಗಿ ನಡೆದುಕೊಂಡರೆ ಉತ್ತಮ ಕೆಲಸಗಳಾಗುತ್ತವೆ ಎಂಬುದಕ್ಕೆ ಇಲ್ಲೊಂದು ಉದಾಹರಣೆ ಇದ್ದು, ಭದ್ರತೆ ಸೌಲಭ್ಯಗಳು ಇಲ್ಲದಿದ್ದ ಶಾಲೆಗೆ ಲೋಕಾಯುಕ್ತ ಪೊಲೀಸರ್ ಅಧಿಕಾರಿಯ ಭೇಟಿ...

ಬೆಂಗಳೂರು: ಅಧಿಕಾರಿಗಳು ಸಂವೇದನಾಶೀಲರಾಗಿ ನಡೆದುಕೊಂಡರೆ ಉತ್ತಮ ಕೆಲಸಗಳಾಗುತ್ತವೆ ಎಂಬುದಕ್ಕೆ ಇಲ್ಲೊಂದು ಉದಾಹರಣೆ ಇದ್ದು, ಭದ್ರತೆ ಸೌಲಭ್ಯಗಳು ಇಲ್ಲದಿದ್ದ ಶಾಲೆಗೆ ಲೋಕಾಯುಕ್ತ ಪೊಲೀಸರ್ ಅಧಿಕಾರಿಯ ಭೇಟಿ, ಭದ್ರತೆ ಹಾಗೂ ನೀರಿನ ಸೌಲಭ್ಯವನ್ನು ತಂದಿದೆ. 
ಸತತ 8 ವರ್ಷಗಳಿಂದ ಹೊಸೂರು ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಶಾಲೆ ಕಾವೇರಿ ನೀರಿಗಾಗಿ ಮನವಿ ಸಲ್ಲಿಸಿದ್ದು, ಲೋಕಾಯುಕ್ತ ಪೊಲೀಸ್ ಭೇಟಿಯ ಬೆನ್ನಲ್ಲೇ ಈ ಶಾಲೆಗೆ ಮಿಂಚಿನ ವೇಗದಲ್ಲಿ ಕಾವೇರಿ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ. 
2017 ರ ನ.25 ರಂದು ಶಾಲೆಗೆ ಭೇಟಿ ನೀಡಿದ್ದ ಲೋಕಾಯುಕ್ತ ಇನ್ಸ್ ಪೆಕ್ಟರ್ ಮಂಜುನಾಥ್ ಭೇಟಿ ನೀಡಿದ್ದು, ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಸೌಲಭ್ಯವೂ ಇರಲಿಲ್ಲ, " ಶಾಲೆಗೆ ಭೇಟಿ ನೀಡಿದಾಗ ಅಲ್ಲಿನ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಗಮನಿಸಿ ತಕ್ಷಣವೇ ಸ್ಥಳೀಯ ಕಾರ್ಪೊರೇಟರ್ ಹಾಗೂ ಟ್ರಾಫಿಕ್ ಪೊಲೀಸ್, ಬಿಬಿಎಂಪಿ ಇಂಜಿನಿಯರ್, ಶಾಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು, ಸಭೆ ನಡೆದ ಒಂದು ವಾರದ ನಂತರ ಶಾಲೆಗೆ ಸೌಲಭ್ಯ ಕಲ್ಪಿಸಲಾಗಿದೆ, ಅಷ್ಟೇ ಅಲ್ಲದೇ ಶಾಲೆಗೆ ತಡವಾಗಿ ಬರುತಿದ್ದ ಶಿಕ್ಷಕರೂ ಸರಿಯಾದ ಸಮಯಕ್ಕೆ ಬರಲು ಪ್ರಾರಂಭಿಸಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT