ರಾಜ್ಯ

ಸಿರಿಧಾನ್ಯ ಮೇಳದಿಂದ ಮೂರು ದಿನಗಳಲ್ಲಿ 107 ಕೋಟಿ ವ್ಯವಹಾರ: ಕೃಷ್ಣ ಬೈರೇಗೌಡ

Nagaraja AB

ಬೆಂಗಳೂರು:ಇಲ್ಲಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದಿಂದ ಕಳೆದ ಮೂರು ದಿನಗಳಲ್ಲಿ 107 ಕೋಟಿ ರೂಪಾಯಿ ವ್ಯವಹಾರ ನಡೆದಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ವಿವಿಧ ಕಂಪನಿಗಳೊಂದಿಗೆ ಮಾಡಿಕೊಂಡ ಒಪ್ಪಂದದಿಂದಾಗಿ ಮುಂದಿನ ಮೂರು ವರ್ಷದಲ್ಲಿ 340 ಕೋಟಿ ರೂ. ವ್ಯಾಪಾರ ಸಂಬಂಧ ವೃದ್ಧಿಯಾಗುವ ನಿರೀಕ್ಷೆಯಿದೆ.
ಮೇಳಕ್ಕೆ ಸುಮಾರು 2 ಲಕ್ಷ ಜನರು ಆಗಮಿಸಿದ್ದಾರೆ, ಜನರ ಆಹಾರ ಪದ್ಧತಿಯಲ್ಲಿ ಬದಲಾವಣೆಯಾಗಲಿದೆ ಎಂಬ ವಿಶ್ವಾಸವಿದ್ದು, ಸಿರಿಧಾನ್ಯ ಮತ್ತು ಸಾವಯವ ಕೃಷಿ ಪದಾರ್ಥಗಳ ಬಳಕೆಯನ್ನು ಪ್ರೋತ್ಸಾಹಿಸಲಾಗುವುದು ಎಂದು ಅವರು ನಿನ್ನೆ ಹೇಳಿದ್ದಾರೆ.

ಸಿರಿಧಾನ್ಯ ಉತ್ಪಾದನೆ ಮತ್ತು ರಪ್ತಿನಲ್ಲಿ ಭಾರತ ಮುಂಚೂಣಿಯಲ್ಲಿದ್ದು, ಮುಂದಿನ ಪೀಳಿಗೆಗೆ ಕಿರು ಆಹಾರದ ಬಳಕೆಯನ್ನು ಪ್ರೋತ್ಸಾಹಿಸುವಲ್ಲಿ ಕರ್ನಾಟಕ ಮುಂದಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

16 ಕೃಷಿ ಉದ್ಯಮಗಳು ಸೇರಿದಂತೆ 44 ಸ್ಟಾರ್ಟ್ ಅಪ್ ಸ್ಥಾಪಿಸಲು ರಾಜ್ಯಸರ್ಕಾರದಿಂದ ಅನುಮೋದನೆ ಪಡೆಯಲಾಗಿದೆ. ಆದರೆ, ಅಷ್ಟು ಪ್ರಮಾಣದ ಹಣ ಸಾಕಾಗದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದೆ . ಕೃಷಿ ಅಭಿವೃದ್ಧಿಗಾಗಿ ರಾಜ್ಯಸರ್ಕಾರ ಹೊಸ ಸಂಶೋಧನೆ ಮತ್ತು ಪ್ರಯೋಗಾಲಯಗಳನ್ನು ಸ್ಥಾಪಿಸಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.



SCROLL FOR NEXT