ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದ ಮಠ, ಜೈನ ದೇವಸ್ಥಾನಗಳನ್ನು ಮುಜರಾಯಿ ಇಲಾಖೆಯಡಿ ತರಲು ಸರ್ಕಾರ ಚಿಂತನೆ

ರಾಜ್ಯದಲ್ಲಿರುವ ಜೈನ ದೇವಸ್ಥಾನಗಳು ಮತ್ತು ಖ್ಯಾತ ಮಠಗಳನ್ನು ಮುಜರಾಯಿ ಇಲಾಖೆಯಡಿ ತರಲು ...

ಬೆಂಗಳೂರು: ರಾಜ್ಯದಲ್ಲಿರುವ ಜೈನ ದೇವಸ್ಥಾನಗಳು ಮತ್ತು ಖ್ಯಾತ ಮಠಗಳನ್ನು ಮುಜರಾಯಿ ಇಲಾಖೆಯಡಿ ತರಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.
ಬೇರೆ ದೇವಸ್ಥಾನಗಳ ಜೊತೆ ಜೈನ ದೇವಸ್ಥಾನಗಳು ಮತ್ತು ಮಠಗಳನ್ನು ತರಲು ಹೊಸ ಕಾಯ್ದೆ ತರಲು ಸರ್ಕಾರ ಚಿಂತಿಸುತ್ತಿದೆ.
ಕರ್ನಾಟಕದಲ್ಲಿ ಮುಜರಾಯಿ ಇಲಾಖೆಯಡಿ 34,559 ದೇವಸ್ಥಾನಗಳಿವೆ. ಅವುಗಳಲ್ಲಿ ಎ ದರ್ಜೆಯ 175 ದೇವಸ್ಥಾನಗಳು (ವಾರ್ಷಿಕ ಆದಾಯ 25 ಲಕ್ಷಕ್ಕಿಂತ ಹೆಚ್ಚು),163 ದೇವಸ್ಥಾನಗಳು(5ರಿಂದ 25 ಲಕ್ಷ ವಾರ್ಷಿಕ ಆದಾಯವಿರುವ) ಮತ್ತು ಉಳಿದವು ಸಿ ದರ್ಜೆಯ( 5 ಲಕ್ಷಕ್ಕಿಂತ ಕಡಿಮೆ ಇರುವ) ದೇವಸ್ಥಾನಗಳಿವೆ. ಮುಜರಾಯಿ ಇಲಾಖೆಯ ಹಿರಿಯ ಅಧಿಕಾರಿಗಳ ಪ್ರಕಾರ, 1.2 ಲಕ್ಷಕ್ಕಿಂತ ಹೆಚ್ಚು ಅರ್ಚಕರು ಈ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ.
ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಮತ್ತು ಹಿರಿಯ ವಕೀಲ ಎನ್.ಕೆ.ಜಗನ್ನಿವಾಸ್ ರಾವ್ ಅವರ ಅಧ್ಯಕ್ಷತೆಯಡಿ ಕಳೆದ ನವೆಂಬರ್ ನಲ್ಲಿ ಮಠ ಮತ್ತು ಇತರ ಪೂಜಾ ಸ್ಥಳಗಳನ್ನು ಮುಜರಾಯಿ ಇಲಾಖೆಯಡಿ ಸೇರಿಸುವ ಕುರಿತು ಅಧ್ಯಯನ ನಡೆಸಲು ಸಮಿತಿ ರಚಿಸಲಾಯಿತು. ಇಲ್ಲಿಯವರೆಗೆ ಸಮಿತಿ 12ಕ್ಕಿಂತ ಹೆಚ್ಚು ಬಾರಿ ಒಟ್ಟು ಸೇರಿ ಅರ್ಚಕರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಿತು. ಸಾಧಕ, ಬಾಧಕಗಳ ಬಗ್ಗೆ ಅಧ್ಯಯನ ನಡೆಸಲಾಯಿತು.
ತಮಿಳುನಾಡು ಮತ್ತು ಕೇರಳ ರಾಜ್ಯಗಳ ಮುಜರಾಯಿ ಕಾಯ್ದೆಯಡಿ ಸಮಿತಿ ಸದಸ್ಯರು ಅಧ್ಯಯನ ನಡೆಸಿದರು. ಅವರ ಅಧ್ಯಯನ ಪ್ರಕಾರ, ಕರಡು ವರದಿ ಸಿದ್ಧವಾಗಿದ್ದು ಮಾರ್ಚ್ ವೇಳೆಗೆ ವರದಿಯನ್ನು ಸಲ್ಲಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT