ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರ (ಸಾಂದರ್ಭಿಕ ಟಿತ್ರ) 
ರಾಜ್ಯ

ವಸತಿ ಯೋಜನೆಯಲ್ಲಿ 250 ಕೋಟಿ ಹಗರಣ: ಸಿಬಿಐ ತನಿಖೆಗೆ ಶೆಟ್ಟರ್ ಆಗ್ರಹ

ವಸತಿ ಯೋಜನೆಯ ಟೆಂಡರ್ ಪ್ರಕ್ರಿಯೆಲ್ಲಿ 250 ಕೋಟಿಯಷ್ಟು ಹಗರಣವಾಗಿದ್ದು, ಈ ಬಗ್ಗೆ ಸಿಬಿಐ ತನಿಖೆಯಾಗಬೇಕೆಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರ ಅನುಷ್ಠಾನಗೊಳಿಸಿರುವ 2 ಸಾವಿರದ 500 ಕೋಟಿ ಮೌಲ್ಯದ ವಸತಿ ಯೋಜನೆಯ ಟೆಂಡರ್ ಪ್ರಕ್ರಿಯೆಲ್ಲಿ 250 ಕೋಟಿಯಷ್ಟು ಹಗರಣವಾಗಿದ್ದು, ಈ ಬಗ್ಗೆ ಸಿಬಿಐ ತನಿಖೆಯಾಗಬೇಕೆಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್  ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರದ ಸಹಭಾಗಿತ್ವದ ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಬಡವರಿಗಾಗಿ 50 ಸಾವಿರ ಮನೆಗಳ ನಿರ್ಮಾಣ ಕಾಮಗಾರಿಯನ್ನು  43 ಪ್ಯಾಕೇಜ್ ಗಳಾಗಿ ತುಂಡಾಗಿಸಿದ್ದು, ಆಯ್ದ ಗುಂಪಿನ 10 ಗುತ್ತಿಗೆದಾರರಿಗೆ ನೀಡುವ  ಮೂಲಕ ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದ್ದಾರೆ.

 ಈ ಸಂಬಂಧ  ಕೊಳಚೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್. ವಿ. ದೇವರಾಜ್  ಕಳೆದ ವರ್ಷ ಬರೆದಿರುವ ಪತ್ರವನ್ನು   ಮಾಧ್ಯಮಗಳಿಗೆ ಬಿಡುಗಡೆಗೊಳಿಸಿದ ಶೆಟ್ಟರ್, ಕಾನೂನುಬಾಹಿರವಾಗಿ ಟೆಂಡರ್ ನೀಡಲಾಗಿದೆ. ಅಧಿಕಾರಿಗಳು ಆಯ್ದ ಗುಂಪಿನ ಗುತ್ತಿಗೆದಾರಿಗೆ  ಟೆಂಡರ್ ನೀಡುವ ಮೂಲಕ ತಪ್ಪು ದಾಖಲೆ ಸೃಷ್ಟಿಸುತ್ತಿದ್ದಾರೆ ಎಂಬಂತಹ ಮಾಹಿತಿ ಉಲ್ಲೇಖಿಸಿರುವುದನ್ನು ವಿವರಿಸಿದರು.

 ಈ ಹಗರಣದಲ್ಲಿ ವಸತಿ ಸಚಿವ ಎಂ. ಕೃಷ್ಣಪ್ಪ ಹಾಗೂ ಅವರ ಮಗ ಪ್ರಿಯಾಕೃಷ್ಣ ಕಮಿಷನ್ ಪಡೆದಿದ್ದಾರೆ ಎಂದು ಶೆಟ್ಟರ್ ಆಪಾದಿಸಿದ್ದಾರೆ.

ಶೆಟ್ಟರ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವ ರಾಮಲಿಂಗಾರೆಡ್ಡಿ, ಹಗರಣ ಸಂಬಂಧ ಸಾಕ್ಷ್ಯಾಧಾರ ಇದ್ದರೆ ಬಿಜೆಪಿ ನಾಯಕರು ಪೊಲೀಸರಿಗೆ ದೂರು ಸಲ್ಲಿಸಲಿ ಎಂದು ತಿಳಿಸಿದ್ದಾರೆ.



Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT