ಸಂಗ್ರಹ ಚಿತ್ರ 
ರಾಜ್ಯ

ರೈತರ ಸಂಕಷ್ಟಕ್ಕೆ ಕೇಂದ್ರ ಸ್ಪಂದಿಸುತ್ತಿಲ್ಲ, ಇದೇ ಕಾರಣಕ್ಕೆ ಕರ್ನಾಟಕ ಬಂದ್: ವಾಟಾಳ್ ನಾಗರಾಜ್

ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ರೈತರು ಸತತ ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಈ ಬಗ್ಗೆ ಸ್ಪಂದಿಸುತ್ತಿಲ್ಲ. ಇದೇ ಕಾರಣಕ್ಕೆ ಕರ್ನಾಟಕ ಬಂದ್ ಮಾಡಲಾಗುತ್ತಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಬೆಂಗಳೂರು: ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ರೈತರು ಸತತ ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಈ ಬಗ್ಗೆ ಸ್ಪಂದಿಸುತ್ತಿಲ್ಲ. ಇದೇ ಕಾರಣಕ್ಕೆ ಕರ್ನಾಟಕ ಬಂದ್ ಮಾಡಲಾಗುತ್ತಿದೆ ಎಂದು ಕನ್ನಡಪರ  ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಗುರುವಾರ ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯ ಸರ್ಕಾರಿ ನೌಕರರ ಸಂಘ, ಲಾರಿ ಚಾಲಕರ ಸಂಘ, ರಾಜ್ಯ ಫಿಲ್ಮ್ ಛೇಂಬರ್ ಸೇರಿದಂತೆ ವಿವಿಧ  ಸಂಘಟನೆಗಳು ಬೆಂಬಲ ನೀಡಿವೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 6ರಿಂದ ಸಂಜೆ 6ಗಂಟೆವರೆಗೆ ಬಂದ್ ನಡೆಯಲಿದೆ ಎಂದು ಹೇಳಿದರು.
ಅಂತೆಯೇ ಸಾರ್ವಜನಿಕರಿಗೆ ತೊಂದರೆ ಕೊಡಬೇಕು ಎಂಬ ಉದ್ದೇಶದಿಂದ ಬಂದ್ ಮಾಡಿಸುತ್ತಿಲ್ಲ. ಕಳೆದ 3 ವರ್ಷಗಳಿಂದ ಗದಗ, ನವಲಗುಂದ ಭಾಗದ ರೈತರು ಗಾಂಧಿ ಮಾದರಿಯ ಸತ್ಯಾಗ್ರಹದ ರೀತಿಯಲ್ಲಿಯೇ ಪ್ರತಿಭಟನೆ  ನಡೆಸುತ್ತಿದ್ದಾರೆ. ಆದರೆ ಯಾರೊಬ್ಬರೂ ಅವರ ಸಮಸ್ಯೆಯನ್ನು ಕೇಳಿಲ್ಲ. ಈ 3 ವರ್ಷಗಳಲ್ಲಿ ಪ್ರಧಾನಿ ಮೋದಿ ಸಾಕಷ್ಟು ಬಾರಿ ಕರ್ನಾಟಕಕ್ಕ ಆಗಮಿಸಿದ್ದಾರೆ. ಆದರೆ ಒಂದು ಬಾರಿಯೂ ರೈತರ ಸಮಸ್ಯೆ ಆಲಿಸುವ ಕೆಲಸ ಮಾಡಿಲ್ಲ.  ಕನಿಷ್ಟ ಪಕ್ಷ ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದಾಗ ಅವರ ಪಕ್ಷದವರೂ ಕೂಡಾ ಈ ಬಗ್ಗೆ ಅವರ ಗಮನಕ್ಕೆ ತಂದಿಲ್ಲ. ಮಹದಾಯಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶಿಸುತ್ತಾರೆಂದು ಬಿಜೆಪಿಯವರು ಭರವಸೆ  ನೀಡಿದರೆ ರಾಜ್ಯ ಬಂದ್ ಹಾಗೂ ಫೆಬ್ರವರಿ 4ರ ಬಂದ್ ವಾಪಸ್ ಪಡೆಯುತ್ತೇವೆ ಎಂದು ಹೇಳಿದರು.
ಇದೇ ವೇಳೆ ಕರ್ನಾಟಕ ಬಂದ್ ರಾಜಕೀಯ ಪ್ರೇರಿತ ಅಲ್ಲ ಅಲ್ಲ ಎಂದು ಹೇಳಿದ ವಾಟಾಳ್ ಇದು ಸಾರ್ವಜನಿಕ ಬಂದ್. ಬಂದ್ ವಿಚಾರದಲ್ಲಿ ಯಾವುದೇ ರಾಜಕೀಯ, ಪಿತೂರಿ ಬೇಡ. ಕನ್ನಡ ನಾಡು, ನುಡಿ, ಜಲ, ಭಾಷೆ ವಿಚಾರದಲ್ಲಿ  ನಾವು ಎಂದಿಗೂ ಒಂದಾಗಿರಬೇಕು. ಸಾರ್ವಜನಿಕರು ಬೆಂಬಲ ನೀಡಬೇಕು ಎಂದು ವಾಟಾಳ್ ಮನವಿ ಮಾಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT