ಟ್ವಿಟರ್ ನಲ್ಲಿ ನಟ ಪ್ರಕಾಶ್ ರೈ 
ರಾಜ್ಯ

ಕಳಸಾ ಬಂಡೂರಿ ಕನ್ನಡಿಗರ ಮೂಲಭೂತ ಹಕ್ಕು, ನಮ್ಮ ಹಕ್ಕಿಗಾಗಿ ಹೋರಾಡೋಣ: ನಟ ಪ್ರಕಾಶ್ ರೈ

ಕಳಸಾ ಬಂಡೂರಿ ನಾಲಾ ಯೋಜನೆ ಮತ್ತು ಮಹದಾಯಿ ನದಿ ನೀರಿಗಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನಟ ಪ್ರಕಾಶ್ ರೈ ಬೆಂಬಲ ಸೂಚಿಸಿದ್ದು, ಮಹದಾಯಿ ನೀರು ಕನ್ನಡಿಗರ ಮೂಲಭೂತ ಹಕ್ಕು ಎಂದು ಹೇಳಿದ್ದಾರೆ.

ಬೆಂಗಳೂರು: ಕಳಸಾ ಬಂಡೂರಿ ನಾಲಾ ಯೋಜನೆ ಮತ್ತು ಮಹದಾಯಿ ನದಿ ನೀರಿಗಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನಟ ಪ್ರಕಾಶ್ ರೈ ಬೆಂಬಲ ಸೂಚಿಸಿದ್ದು, ಮಹದಾಯಿ ನೀರು ಕನ್ನಡಿಗರ ಮೂಲಭೂತ ಹಕ್ಕು ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ನಟ ಪ್ರಕಾಶ್ ರೈ, ಕಳಸಾ ಬಂಡೂರಿಯಿಂದ ಹರಿಯುವ ನೀರಿನ ಮೇಲೆ ಕನ್ನಡಿಗರ ಹಕ್ಕಿದೆ. ಅದು ಅವರ ಮೂಲಭೂತ ಹಕ್ಕಾಗಿದ್ದು, ನಮ್ಮ ನೀರನ್ನು ನಾವು ಬಳಿಸಿಕೊಳ್ಳಲು  ಬಿಡಬೇಕು. ನಮ್ಮ ಹಕ್ಕಿಗಾಗಿ ನಾವು ಒಗ್ಗೂಡಿ ಹೋರಾಡೋಣ ಎಂದು ಹೇಳಿದ್ದಾರೆ.
ಅಂತೆಯೇ ಪರೋಕ್ಷವಾಗಿ ಬಿಜೆಪಿ ವಿರುದ್ಧ ಕಿಡಿಕಾರಿರುವ ನಟ ಪ್ರಕಾಶ್ ರೈ, ಯಾವುದೇ ರಾಜಕೀಯ ಪಕ್ಷ ಒಮ್ಮೆ ಆಯ್ಕೆಯಾದ ಮೇಲೆ ಅದು ಚುನಾಯಿತ ಪಕ್ಷವಾಗುತ್ತದೆ. ರಾಜಕೀಯ ಪಕ್ಷವಾಗಿ ಅದು ಉಳಿಯುವುದಿಲ್ಲ. ಅದು  ಜನರಿಗಾಗಿ ಕೆಲಸ ಮಾಡುವ ಸರ್ಕಾರವಾಗುತ್ತದೆ. ಯಾವುದೇ ಪಕ್ಷ ಕೇಂದ್ರದಲ್ಲಿ ನಮ್ಮ ಸರ್ಕಾರವಿದೆ. ಆ ರಾಜ್ಯದಲ್ಲಿಯೂ ನಮ್ಮದೇ ಸರ್ಕಾರವಿದೆ. ರಾಜಕೀಯ ಪಕ್ಷವಾಗಿ ನಾವು ನೀರು ತರುತ್ತೇವೆ ಎಂಬುದು ಅಪ್ಪಟ ಸುಳ್ಳು.  ರಾಜಕೀಯ ಪಕ್ಷಗಳು ತಮ್ಮ ಸಿದ್ಧಾಂತ ಮರೆತು ನಮ್ಮ ಮೂಲಭೂತ ಹಕ್ಕಿಗಾಗಿ ಒಗ್ಗೂಡಿ ಹೋರಾಡಬೇಕಿದೆ. ಎಲ್ಲ ನಾಯಕರು ನಿಮ್ಮ ರಾಜಕೀಯ ಸಿದ್ಧಾಂತವನ್ನು ಪಕ್ಕಕ್ಕಿಟ್ಟು, ನೀರಿನ ವಿಚಾರದಲ್ಲಿ ರಾಜಕೀಯ ಮಾಡುವುದನ್ನು  ನಿಲ್ಲಿಸಬೇಕು. ಮತ್ತು ನೀರಿನ ವಿಚಾರದಲ್ಲೂ ರಾಜಕೀಯ ಮಾಡಿ ಮತ ಬಿಕ್ಷೆ ಬೇಡುವುದನ್ನು ನಿಲ್ಲಿಸಿ. ಎಲ್ಲರೂ ಒಂದಾಗಿ ನೀರಿಗಾಗಿ ಒಂದಾಗಬೇಕು. ಇದೇನೂ ಬಗೆಹರಿಸಲಾಗದ ಸಮಸ್ಯೆ ಅಲ್ಲ. 
ಇದು ಜನಪರ ಹೋರಾಟ. ದಯಮಾಡಿ ಜನರ ಮೂಲಭೂತ ಹಕ್ಕಿಗಾಗಿ ಹೋರಾಡಿ, ಈ ಹೋರಾಟದಲ್ಲಿ ನಾನು ಜನರ ಪರ ನಿಲ್ಲುತ್ತೇನೆ. ಒಂದಾಗಿ ಬನ್ನಿ ಒಂದೇ ವೇದಿಕಯಲ್ಲಿ ನಿಲ್ಲಿ. ಒಟ್ಟಾಗಿ ಹೋರಾಡೋಣ, ನಮ್ಮ ಹಕ್ಕನ್ನು  ನಾವುಸಾಧಿಸೋಣ ಎಂದು ಪ್ರಕಾಶ್ ರೈ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT