ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಅಭಯಾರಣ್ಯ ವ್ಯಾಪ್ತಿಯಲ್ಲಿ 2 ಹುಲಿ, 1 ಆನೆ ಅನುಮಾನಾಸ್ಪದ ಸಾವು

ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ವಲಯದ ಜಿಎಸ್ ಬೆಟ್ಟ ವ್ಯಾಪ್ತಿಯಲ್ಲಿ ಎರಡು ಹುಲಿಗಳು ಹಾಗೂ ಒಂದು ಆನೆ ನಿಗೂಢವಾಗಿ ಸಾವನ್ನಪ್ಪಿವೆ.

ಮೈಸೂರು: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ವಲಯದ ಜಿಎಸ್ ಬೆಟ್ಟ ವ್ಯಾಪ್ತಿಯಲ್ಲಿ ಎರಡು ಹುಲಿಗಳು ಹಾಗೂ ಒಂದು ಆನೆ ನಿಗೂಢವಾಗಿ ಸಾವನ್ನಪ್ಪಿವೆ.
ಎರಡು ಹುಲಿಗಳಲ್ಲಿ ಒಂದು ಗಂಡು ಇನ್ನೊಂದು ಹೆಣ್ಣು ಹುಲಿಗಳಾಗಿದ್ದು  ಕೊಳದ ಸಮೀಪದಲ್ಲಿ ಇವುಗಳ ಮೃತದೇಹ ದೊರಕಿದೆ. ಇಲ್ಲಿಂದ ಕೆಲವು ಮೀಟರ್ ಗಳಷ್ಟು ದೂರದಲ್ಲಿ ಹೆಣ್ಣು ಆನೆಯೊಂದರ ದೇಹವು ಪತ್ತೆಯಾಗಿದೆ. ಎರಡೂ ಹುಲಿಗಳು ಎರಡು ಮತ್ತು ಮೂರು ವರ್ಷಗಳ ನಡುವಿನ ವಯಸ್ಸಿನವಾಗಿದ್ದು ನಾಲ್ಕು ದಿನಗಳ ಹಿಂದೆ ಮರಣ ಹೊಂದಿರಬಹುದು ಎಂದು ಅರಣ್ಯ ಇಲಾಕಾ ಅಧಿಕಾರಿಗಳು ಹೇಳಿದ್ದಾರೆ.
"ಈ ಪ್ರಾಣಿಗಳ ದೇಹಗಳನ್ನು ನಾವು ಕಂಡಾಗ ಅವು ಕೊಳೆತಿರುವ ಸ್ಥಿತಿಯಲ್ಲಿದ್ದವು. ಕೆಲವು ಕಾಡು ಪ್ರಾಣಿಗಳು ಹುಲಿಗಳ ದೇಹದಿಂದ ಮಾಂಸವನ್ನು ತಿಂದಿದ್ದವು ಮತ್ತು ಆನೆಯ ಮಾಂಸವನ್ನು ಕೂಡಾ ಕಾಡು ಪ್ರಾಣಿಗಳು ತಿಂದಿದ್ದವು ಸತ್ತ ಆನೆಯ ಯಕೃತ್ತು ದೇಹದಿಂದ ಹೊರಬಂದಿತ್ತು. " ಪ್ರಾಣಿಗಳ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದ ಪಶುವೈದ್ಯ ಡಾ. ನಾಗರಾಜ್ ಹೇಳಿದ್ದಾರೆ.
"ಹುಲಿಗಳು ಪರಸ್ಪರ ಹೋರಾಟ ನಡೆಸಿದ್ದಕ್ಕಾಗಿ ಮೃತವಾಗಿರುವುದೆ ಅಥವಾ ಅಲ್ಲವೆ ಎನ್ನುವ ಕುರಿತು ನಮಗೆ ಗೊಂದಲವಿದೆ. ಹುಲಿಗಳು ಮತ್ತು ಆನೆಗಳ ಸಾವಿಗೆ ವಿಷಕಾರಿ ವಸ್ತುಗಳು ಕಾರಣವಾಗಿರಬಹುದು ಈ ಹಂತದಲ್ಲಿ ಕಾಡು ಪ್ರಾಣಿಗಳು ಹೇಗೆ ವಿಷಕಾರಿ ಪದಾರ್ಥಗಳನ್ನು ತಿಂದಿವೆ ಎಂದು ನಮಗೆ ಹೇಲಲಾಗುವುದಿಲ್ಲ." ಹಿರಿಯ ಅಧಿಕಾರಿಗಳೊಬ್ಬರು ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿದ ವೈದ್ಯ ನಾಗರಾಜ್ ಪ್ರಾಣಿಗಳ ದೇಹದ ಭಾಗಗಳನ್ನು, ಅವುಗಳ ದೇಹದಲ್ಲಿ ಸಿಕ್ಕ ಪದಾರ್ಥಗಳನ್ನು ಬೆಂಗಳೂರು ಹಾಗೂ ಮೈಸೂರಿನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಅಲ್ಲಿಂದ ವರದಿ ಬಂದ ಬಳಿಕ ನಾವು ಈ ಪ್ರಾಣಿಗಳ ಸಾವಿನ ಬಗೆಗೆ ನಿಖರ ಕಾರಣ ತಿಳಿಯಬಹುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT