ಸಿದ್ದೇಶ್ವರ ಸ್ವಾಮೀಜಿ 
ರಾಜ್ಯ

ಪದ್ಮ ಶ್ರೀ ಪ್ರಶಸ್ತಿಯನ್ನು ಗೌರವಯುತವಾಗಿ ನಿರಾಕರಿಸಿದ ಸಿದ್ದೇಶ್ವರ ಸ್ವಾಮೀಜಿ

ದೇಶದ ಅತ್ಯುನ್ನತ ನಾಗರಿಕ ಪದ್ಮ ಶ್ರೀ ಪ್ರಶಸ್ತಿಯನ್ನು ವಿಜಯಪುರದ ಜ್ಞಾನ ಯೋಗಾಶ್ರಮದ ಜ್ಞಾನ ಯೋಗಿ ಸಿದ್ದೇಶ್ವರ ಸ್ವಾಮೀಜಿ ಅವರ ಗೌರವಯುತವಾಗಿ ನಿರಾಕರಿಸಿದ್ದಾರೆ...

ವಿಜಯಪುರ: ದೇಶದ ಅತ್ಯುನ್ನತ ನಾಗರಿಕ ಪದ್ಮ ಶ್ರೀ ಪ್ರಶಸ್ತಿಯನ್ನು ವಿಜಯಪುರದ ಜ್ಞಾನ ಯೋಗಾಶ್ರಮದ ಜ್ಞಾನ ಯೋಗಿ ಸಿದ್ದೇಶ್ವರ ಸ್ವಾಮೀಜಿ ಅವರ ಗೌರವಯುತವಾಗಿ ನಿರಾಕರಿಸಿದ್ದಾರೆ. 
ಬುದ್ಧಿಜೀ ಎಂದು ಪ್ರಸಿದ್ಧರಾಗಿರುವ ಸಿದ್ಧೇಶ್ವರ ಸ್ವಾಮೀಜಿ ಅವರು ಇಲ್ಲಿಯವರೆಗೂ ನನ್ನ ಜೀವನದಲ್ಲಿ ಯಾವುದೇ ಗೌರವವನ್ನು ಸ್ವೀಕರಿಸಿಲ್ಲ ಎಂಬ ಕಾರಣ ನೀಡಿ ಪದ್ಮ ಶ್ರೀ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. 
ಕೇಂದ್ರ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿ ಮೇಲೆ ನನಗೆ ಅಪಾರ ಗೌರವವಿದೆ. ನಾನು ಓರ್ವ ಸರಳ ವ್ಯಕ್ತಿ. ನಾನು ಸಾಮಾನ್ಯ ಜೀವನವನ್ನು ನಡೆಸುತ್ತಾ ಆಧ್ಯಾತ್ಮಿಕ ಬೋಧನೆ ಮೂಲಕ ಜನರನ್ನು ಸುಖಮಯ ಜೀವನದತ್ತ ಕೊಂಡೊಯ್ಯುವ ಉದ್ದೇಶ ನನ್ನದು ಎಂದು ಸಿದ್ದೇಶ್ವರ ಸ್ವಾಮೀಜಿಗಳು ಸುದ್ದಿಗಾರರಿಗೆ ತಿಳಿಸಿದ್ದಾರೆ. 
ನನ್ನ ಜೀವನದಲ್ಲಿ ನಾನು ಎಂದಿಗೂ ಯಾವುದೇ ಗೌರವ ಪುರಸ್ಕಾರಗಳನ್ನು ಸ್ವೀಕರಿಸಿಲ್ಲ. ಈ ಹಿಂದೆ ಕರ್ನಾಟಕ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಪ್ರಕಟಿಸಿದ್ದರು. ಆದರೆ ನಾನು ಆ ಗೌರವವನ್ನು ನಯವಾಗಿ ನಿರಾಕರಿಸಿದ್ದೆ. ಅದೇ ರೀತಿ ಪದ್ಮ ಶ್ರೀ ಪ್ರಶಸ್ತಿಯನ್ನು ನಿರಾಕಿಸಿದ್ದು ಇದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸಿದ್ದೇಶ್ವರ ಸ್ವಾಮೀಜಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT