ರಾಜ್ಯಪಾಲ ವಜೂಭಾಯಿ ವಾಲಾ 
ರಾಜ್ಯ

ರಾಜ್ಯ ಸರ್ಕಾರದ ಸಾಧನೆಗಳನ್ನು ಕೊಂಡಾಡಿದ ರಾಜ್ಯಪಾಲ ವಜುಭಾಯಿ ವಾಲಾ

ಬಂಡವಾಳ ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ 2ನೇ ಬಾರಿಗೆ ಮೊದಲ ಸ್ಥಾನದಲ್ಲಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲಾ ಅವರು, ರಾಜ್ಯ ಸರ್ಕಾರದ ಸಾಧನೆಗಳನ್ನು ಶುಕ್ರವಾರ ಕೊಂಡಾಡಿದ್ದಾರೆ...

ಬೆಂಗಳೂರು: ಬಂಡವಾಳ ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ 2ನೇ ಬಾರಿಗೆ ಮೊದಲ ಸ್ಥಾನದಲ್ಲಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲಾ ಅವರು, ರಾಜ್ಯ ಸರ್ಕಾರದ ಸಾಧನೆಗಳನ್ನು ಶುಕ್ರವಾರ ಕೊಂಡಾಡಿದ್ದಾರೆ. 
ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಿನ್ನೆ ನಡೆದ 69ನೇ ಗಣರಾಜ್ಯೋತ್ಸವದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ತಮ್ಮ ಭಾಷಣದುದ್ದಕ್ಕೂ ರಾಜ್ಯ ಸರ್ಕಾರದ ಸಾಧನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಹಾಡಿ ಹೊಗಳಿದ್ದಾರೆ. 
ದೇಶದಲ್ಲಿ ರಾಜ್ಯ ಅತಿ ಹೆಚ್ಚು ಪ್ರಗತಿ ಹೊಂದಿದ ರಾಜ್ಯಗಳಲ್ಲಿ ಒಂದಾಗಿದೆ. ಮಹಿಳೆಯರ ಸಬಲೀಕರಣ ಮತ್ತು ಘನತೆ ರಕ್ಷಿಸುವುದಕ್ಕಾಗಿ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯ ದತ್ತ ಕೇಂದ್ರವನ್ನು ಸ್ಥಾಪಿಸಿದ್ದು, ಅದು ಸರ್ಕಾರದ ದಾಖಲೆಗಳನ್ನು ರಕ್ಷಿಸಿಡುವ ಖಜಾನೆಯಾಗಿದೆ ಎಂದು ಹೇಳಿದ್ದಾರೆ. 
ಐಟಿ ಮತ್ತು ಬಿಟಿ ವಲಯಗಳಲ್ಲಿ ರಾಜ್ಯ ಯಾವಾಗಲೂ ಮುಂಚೂಣಿಯಲ್ಲಿದೆ. ಐಟಿ ಉದ್ದಿಮೆಯ ದಕ್ಷತೆಯಿಂದಾಗಿ 2017ನೇ ಸಾಲಿನಲ್ಲಿ ರಾಜ್ಯವು ಐಟಿ ರಫ್ತು ಮೂಲಕ ದೇಶಕ್ಕೆ ರೂ.3 ಲಕ್ಷ ಕೋಟಿಗಳನ್ನು ಕೊಡುಗೆಯಾಗಿ ನೀಡಿದೆ. ಜೈವಿಕ ತಂತ್ರಜ್ಞಾನ ಉದ್ದಿಮೆಯ ಉದಾಯಕ್ಕೆ ಶೇ.35ರಷ್ಟು ಕೊಡುಗೆ ನೀಡಿದೆ. ರಾಜ್ಯ ಸರ್ಕಾರ ಸುಮಾರು 2147 ಕಿ.ಮೀ ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುತ್ತಿದೆ ಎಂದು ತಿಳಿಸಿದ್ದಾರೆ. 
ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿರುವ ಶಾಲೆಗಳಲ್ಲಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ  ಭಾಗಿಯಾಗಿದ್ದು, ಇದು ಕಾರ್ಯಕ್ರಮದ ರಂಗನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿತ್ತು. ಕಾರ್ಯಕ್ರಮ ಹಿನ್ನಲೆಯಲ್ಲಿ ಸ್ಥಳದಲ್ಲಿ ನಗರ ಪೊಲೀಸರು ಭಾರೀ ಭದ್ರತೆಯನ್ನು ಒದಗಿಸಿದ್ದರು. 
ಮೈದಾನದ ಸುತ್ತಮುತ್ತಲೂ ಮೊಬೈಲ್ ವ್ಯಾನ್ ಗಳನ್ನು ನಿಲ್ಲಿಸಲಾಗಿತ್ತು. ಮೊಬೈಲ್ ವ್ಯಾನ್ ಗಳ ಮೇಲೆ ಸರ್ಕಾರ ಸಾಧನೆಗಳ ಜಾಹೀರಾತುಗಳನ್ನು ಪ್ರದರ್ಶಿಸಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT