ಕವಿ ಕನಕದಾಸ ಹಾಗೂ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ. ಸಿ. ರೆಡ್ಡಿ ಅವರ ಭಾವಚಿತ್ರ 
ರಾಜ್ಯ

ವಿಧಾನಸೌಧ ಆವರಣದಲ್ಲೇ ಕೆ. ಸಿ. ರೆಡ್ಡಿ ಹಾಗೂ ಕವಿ ಕನಕದಾಸರ ಪುತ್ಹಳಿ ಸ್ಥಾಪಿಸಲು ನಿರ್ಧಾರ

ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ. ಸಿ ರೆಡ್ಡಿ ಮತ್ತು ಕವಿ ಕನಕದಾಸರ ಪುತ್ಹಳಿಯನ್ನು ವಿಧಾನಸೌಧದ ಆವರಣದಲ್ಲೇ ಸ್ಥಾಪನೆ ಮಾಡಲು ರಾಜ್ಯಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ. ಸಿ ರೆಡ್ಡಿ ಮತ್ತು ಕವಿ ಕನಕದಾಸರ ಪುತ್ಹಳಿಯನ್ನು ವಿಧಾನಸೌಧದ ಆವರಣದಲ್ಲೇ ಸ್ಥಾಪನೆ ಮಾಡಲು ರಾಜ್ಯಸರ್ಕಾರ ನಿರ್ಧರಿಸಿದೆ. ತಲಾ 2 ಕೋಟಿ ರೂಪಾಯಿಗಳ ವೆಚ್ಚದಲ್ಲಿ  ಕೆ. ಸಿ ರೆಡ್ಡಿ ಹಾಗೂ ಕನಕದಾಸರ ಪುತ್ಹಳಿ ನಿರ್ಮಾಣಕ್ಕೆ ಹಣಕಾಸು ಇಲಾಖೆ ಅನುಮೋದನೆ ನೀಡಿದೆ.

ಮೈಸೂರು ರಾಜ್ಯದ ಪ್ರಥಮ ಮುಖ್ಯಮಂತ್ರಿಯಾಗಿದ್ದ ಚಂಗಲ್ ರಾಯರೆಡ್ಡಿ,
ವಿಧಾನಸೌಧದ ನೀಲಿನಕ್ಷೆ ರೂಪಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು. ಇವರ ಆಳ್ವಿಕೆಯ ಕಾಲದಲ್ಲಿ ಮಾಜಿ ಪ್ರಧಾನಮಂತ್ರಿ  ಜವಹರಲಾಲ್ ನೆಹರೂ ಅವರನ್ನು ಬೆಂಗಳೂರಿಗೆ ಕರೆಯಿಸಿ  ವಿಧಾನಸೌಧ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು.

ವಿಧಾನಸೌಧದ ಆಸೆಂಬ್ಲಿ ಹಾಲ್ ನ ಒಳಗಡೆ ಪುತ್ಹಳಿ ಸ್ಥಾಪಿಸಬೇಕೆಂದು ಹಲವು ದಿನಗಳ ಬೇಡಿಕೆಯಾಗಿದ್ದು, ವಿಧಾನಸೌಧದ ಪಶ್ಟಿಮ ಧ್ವಾರದಲ್ಲೇ ಪುತ್ಹಳಿ ನಿರ್ಮಾಣ ಮಾಡಲಾಗುವುದು ಎಂದು ವಿಧಾನಸಭಾಧ್ಯ ಕೆ. ಬಿ. ಕೋಳಿವಾಡ್ ತಿಳಿಸಿದ್ದಾರೆ.

ಮಾರ್ಚ್ ತಿಂಗಳೊಳಗೆ ಪುತ್ಹಳಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

 ಆದರೆ, ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT