ಕವಿ ಕನಕದಾಸ ಹಾಗೂ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ. ಸಿ. ರೆಡ್ಡಿ ಅವರ ಭಾವಚಿತ್ರ 
ರಾಜ್ಯ

ವಿಧಾನಸೌಧ ಆವರಣದಲ್ಲೇ ಕೆ. ಸಿ. ರೆಡ್ಡಿ ಹಾಗೂ ಕವಿ ಕನಕದಾಸರ ಪುತ್ಹಳಿ ಸ್ಥಾಪಿಸಲು ನಿರ್ಧಾರ

ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ. ಸಿ ರೆಡ್ಡಿ ಮತ್ತು ಕವಿ ಕನಕದಾಸರ ಪುತ್ಹಳಿಯನ್ನು ವಿಧಾನಸೌಧದ ಆವರಣದಲ್ಲೇ ಸ್ಥಾಪನೆ ಮಾಡಲು ರಾಜ್ಯಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ. ಸಿ ರೆಡ್ಡಿ ಮತ್ತು ಕವಿ ಕನಕದಾಸರ ಪುತ್ಹಳಿಯನ್ನು ವಿಧಾನಸೌಧದ ಆವರಣದಲ್ಲೇ ಸ್ಥಾಪನೆ ಮಾಡಲು ರಾಜ್ಯಸರ್ಕಾರ ನಿರ್ಧರಿಸಿದೆ. ತಲಾ 2 ಕೋಟಿ ರೂಪಾಯಿಗಳ ವೆಚ್ಚದಲ್ಲಿ  ಕೆ. ಸಿ ರೆಡ್ಡಿ ಹಾಗೂ ಕನಕದಾಸರ ಪುತ್ಹಳಿ ನಿರ್ಮಾಣಕ್ಕೆ ಹಣಕಾಸು ಇಲಾಖೆ ಅನುಮೋದನೆ ನೀಡಿದೆ.

ಮೈಸೂರು ರಾಜ್ಯದ ಪ್ರಥಮ ಮುಖ್ಯಮಂತ್ರಿಯಾಗಿದ್ದ ಚಂಗಲ್ ರಾಯರೆಡ್ಡಿ,
ವಿಧಾನಸೌಧದ ನೀಲಿನಕ್ಷೆ ರೂಪಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು. ಇವರ ಆಳ್ವಿಕೆಯ ಕಾಲದಲ್ಲಿ ಮಾಜಿ ಪ್ರಧಾನಮಂತ್ರಿ  ಜವಹರಲಾಲ್ ನೆಹರೂ ಅವರನ್ನು ಬೆಂಗಳೂರಿಗೆ ಕರೆಯಿಸಿ  ವಿಧಾನಸೌಧ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು.

ವಿಧಾನಸೌಧದ ಆಸೆಂಬ್ಲಿ ಹಾಲ್ ನ ಒಳಗಡೆ ಪುತ್ಹಳಿ ಸ್ಥಾಪಿಸಬೇಕೆಂದು ಹಲವು ದಿನಗಳ ಬೇಡಿಕೆಯಾಗಿದ್ದು, ವಿಧಾನಸೌಧದ ಪಶ್ಟಿಮ ಧ್ವಾರದಲ್ಲೇ ಪುತ್ಹಳಿ ನಿರ್ಮಾಣ ಮಾಡಲಾಗುವುದು ಎಂದು ವಿಧಾನಸಭಾಧ್ಯ ಕೆ. ಬಿ. ಕೋಳಿವಾಡ್ ತಿಳಿಸಿದ್ದಾರೆ.

ಮಾರ್ಚ್ ತಿಂಗಳೊಳಗೆ ಪುತ್ಹಳಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

 ಆದರೆ, ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ