ಕವಿ ಕನಕದಾಸ ಹಾಗೂ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ. ಸಿ. ರೆಡ್ಡಿ ಅವರ ಭಾವಚಿತ್ರ 
ರಾಜ್ಯ

ವಿಧಾನಸೌಧ ಆವರಣದಲ್ಲೇ ಕೆ. ಸಿ. ರೆಡ್ಡಿ ಹಾಗೂ ಕವಿ ಕನಕದಾಸರ ಪುತ್ಹಳಿ ಸ್ಥಾಪಿಸಲು ನಿರ್ಧಾರ

ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ. ಸಿ ರೆಡ್ಡಿ ಮತ್ತು ಕವಿ ಕನಕದಾಸರ ಪುತ್ಹಳಿಯನ್ನು ವಿಧಾನಸೌಧದ ಆವರಣದಲ್ಲೇ ಸ್ಥಾಪನೆ ಮಾಡಲು ರಾಜ್ಯಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ. ಸಿ ರೆಡ್ಡಿ ಮತ್ತು ಕವಿ ಕನಕದಾಸರ ಪುತ್ಹಳಿಯನ್ನು ವಿಧಾನಸೌಧದ ಆವರಣದಲ್ಲೇ ಸ್ಥಾಪನೆ ಮಾಡಲು ರಾಜ್ಯಸರ್ಕಾರ ನಿರ್ಧರಿಸಿದೆ. ತಲಾ 2 ಕೋಟಿ ರೂಪಾಯಿಗಳ ವೆಚ್ಚದಲ್ಲಿ  ಕೆ. ಸಿ ರೆಡ್ಡಿ ಹಾಗೂ ಕನಕದಾಸರ ಪುತ್ಹಳಿ ನಿರ್ಮಾಣಕ್ಕೆ ಹಣಕಾಸು ಇಲಾಖೆ ಅನುಮೋದನೆ ನೀಡಿದೆ.

ಮೈಸೂರು ರಾಜ್ಯದ ಪ್ರಥಮ ಮುಖ್ಯಮಂತ್ರಿಯಾಗಿದ್ದ ಚಂಗಲ್ ರಾಯರೆಡ್ಡಿ,
ವಿಧಾನಸೌಧದ ನೀಲಿನಕ್ಷೆ ರೂಪಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು. ಇವರ ಆಳ್ವಿಕೆಯ ಕಾಲದಲ್ಲಿ ಮಾಜಿ ಪ್ರಧಾನಮಂತ್ರಿ  ಜವಹರಲಾಲ್ ನೆಹರೂ ಅವರನ್ನು ಬೆಂಗಳೂರಿಗೆ ಕರೆಯಿಸಿ  ವಿಧಾನಸೌಧ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು.

ವಿಧಾನಸೌಧದ ಆಸೆಂಬ್ಲಿ ಹಾಲ್ ನ ಒಳಗಡೆ ಪುತ್ಹಳಿ ಸ್ಥಾಪಿಸಬೇಕೆಂದು ಹಲವು ದಿನಗಳ ಬೇಡಿಕೆಯಾಗಿದ್ದು, ವಿಧಾನಸೌಧದ ಪಶ್ಟಿಮ ಧ್ವಾರದಲ್ಲೇ ಪುತ್ಹಳಿ ನಿರ್ಮಾಣ ಮಾಡಲಾಗುವುದು ಎಂದು ವಿಧಾನಸಭಾಧ್ಯ ಕೆ. ಬಿ. ಕೋಳಿವಾಡ್ ತಿಳಿಸಿದ್ದಾರೆ.

ಮಾರ್ಚ್ ತಿಂಗಳೊಳಗೆ ಪುತ್ಹಳಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

 ಆದರೆ, ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT