ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಬಿಜೆಪಿಯಿಂದ ಗೋ ರಕ್ಷಣೆ ಯಜ್ಞ ಆಯೋಜನೆ

ಗೋ ರಕ್ಷಣೆ ಪಡೆಯ ರಾಜ್ಯ ಬಿಜೆಪಿ 24 ಗಂಟೆಗಳ ಗೋ ರಕ್ಷಣೆ ಅಷ್ಟಯಾಮ ಯಜ್ಞವನ್ನು....

ಬೆಂಗಳೂರು: ಗೋ ರಕ್ಷಣೆ ಪಡೆಯ ರಾಜ್ಯ ಬಿಜೆಪಿ 24 ಗಂಟೆಗಳ ಗೋ ರಕ್ಷಣೆ ಅಷ್ಟಯಾಮ ಯಜ್ಞವನ್ನು ಪುಟ್ಟೇನಹಳ್ಳಿಯ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ಆಯೋಜಿಸಿದೆ.
ಗೋ ರಕ್ಷಣೆ ಕೇಂದ್ರದ ರಾಜ್ಯ ಸಂಚಾಲಕ ಸಿದ್ದಾರ್ಥ ಗೊಯೆಂಕಾ ಮಾತನಾಡಿ, ಗೋವುಗಳ ಮಹತ್ವದ ಕುರಿತು ಜಾಗೃತಿ ಮೂಡಿಸಲು ಮತ್ತು ಗೋವುಗಳ ಸಂಖ್ಯೆಯನ್ನು ಹೆಚ್ಚಿಸಿ ದೇಶದ ಆರ್ಥಿಕತೆಯನ್ನು ಬಲಿಷ್ಟಗೊಳಿಸಲು ಯಜ್ಞವನ್ನು ಆಯೋಜಿಸಲಾಗಿದೆ.
ಇದೇ ಶುಕ್ರವಾರ ಯಜ್ಞ ಆರಂಭಗೊಂಡು ಮರುದಿನ ಅಪರಾಹ್ನ 3 ಗಂಟೆಗೆ ಮುಕ್ತಾಯವಾಗಲಿದೆ ಎಂದು ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್, ಶಾಸಕರಾದ ಬಿ.ಎನ್.ವಿಜಯ್ ಕುಮಾರ್ ಮತ್ತು ಸತೀಶ್ ರೆಡ್ಡಿ ಯಜ್ಞದಲ್ಲಿ ಭಾಗವಹಿಸಲಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿರುವ ಬಿಜೆಪಿ ಮೆಗಾ ರ್ಯಾಲಿಗೆ ಮುನ್ನ ಈ ಯಜ್ಞ ನಡೆಯಲಿದೆ. ಒಂದು ಲಕ್ಷಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಅರಮನೆ ಮೈದಾನದಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT