ರಾಮನಗರ: ಗಂಟಲಿಗೆ ಆಹಾರ ಸಿಕ್ಕಿ ಮೂರು ತಿಂಗಳ ಮಗು ಸಾವು 
ರಾಜ್ಯ

ರಾಮನಗರ: ಗಂಟಲಿಗೆ ಆಹಾರ ಸಿಕ್ಕಿ ಮೂರು ತಿಂಗಳ ಮಗು ಸಾವು

ಮಗುವಿಗೆ ತಿನ್ನಿಸಿದ ಆಹಾರವೇ ಗಂಟಲಿನಲ್ಲಿ ಸಿಲುಕಿ ಮೂರು ತಿಂಗಳ ಮಗುವೊಂದು ಮೃತಪಟ್ಟ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮಗರ: ಮಗುವಿಗೆ ತಿನ್ನಿಸಿದ ಆಹಾರವೇ ಗಂಟಲಿನಲ್ಲಿ ಸಿಲುಕಿ ಮೂರು ತಿಂಗಳ ಮಗುವೊಂದು ಮೃತಪಟ್ಟ ಘಟನೆ ರಾಮನಗರದಲ್ಲಿ ನಡೆದಿದೆ.
ಮಾಗಡಿ ತಾಲೂಕಿನ ಹೊಸಪಾಳ್ಯದ ಮಂಜುನಾಥ್ ಹಾಗೂ ಧನಲಕ್ಷ್ಮೀ ದಂಪತಿಯ ಹೆಣ್ಣು ಮಗು ಸಾವನ್ನಪ್ಪಿದ್ದು ಇವರು ಕಳೆದ ಹದಿನೈದು ದಿನಗಳಿಂದ ಮಗುವಿಗೆ ಮಣ್ಣಿ ರೂಪದ ಆಹಾರ ತಿನ್ನಿಸುತ್ತಿದ್ದರು.
ಆದರೆ ಇಂದು ಬೆಳಗ್ಗೆ ಸಹ ಆಹಾರ ತಿನ್ನಿಸುವ ವೇಳೆ ಗಂಟಲಲ್ಲಿ ಸಿಲುಕ್ಜಿದ ಪರಿಣಾಮ ಮಗುವಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಆದರೂ ಆಸ್ಪತ್ರೆಗೆ ತಲುಪುವ ಮಾರ್ಗದ ನಡುವೆಯೇ ಮಗು ಪ್ರಾಣ ಬಿಟ್ಟಿದೆ. ಆಸ್ಪತ್ರೆಯಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯರು ಮಗುವಿಗೆ ನೀಡಿದ್ದ ಆಹಾರ ಗಂಟಲಲ್ಲಿ ಸಿಲುಕಿದ ಪರಿಣಾಮವೇ ಸಾವಿಗೀಡಾಗಿರುವುದಾಗಿ ಹೇಳಿದ್ದಾರೆ.
ಮಗುವಿನ ಸಾವಿನ ಕಾರಣ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT