ರಾಮನಗರ: ಗಂಟಲಿಗೆ ಆಹಾರ ಸಿಕ್ಕಿ ಮೂರು ತಿಂಗಳ ಮಗು ಸಾವು 
ರಾಜ್ಯ

ರಾಮನಗರ: ಗಂಟಲಿಗೆ ಆಹಾರ ಸಿಕ್ಕಿ ಮೂರು ತಿಂಗಳ ಮಗು ಸಾವು

ಮಗುವಿಗೆ ತಿನ್ನಿಸಿದ ಆಹಾರವೇ ಗಂಟಲಿನಲ್ಲಿ ಸಿಲುಕಿ ಮೂರು ತಿಂಗಳ ಮಗುವೊಂದು ಮೃತಪಟ್ಟ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮಗರ: ಮಗುವಿಗೆ ತಿನ್ನಿಸಿದ ಆಹಾರವೇ ಗಂಟಲಿನಲ್ಲಿ ಸಿಲುಕಿ ಮೂರು ತಿಂಗಳ ಮಗುವೊಂದು ಮೃತಪಟ್ಟ ಘಟನೆ ರಾಮನಗರದಲ್ಲಿ ನಡೆದಿದೆ.
ಮಾಗಡಿ ತಾಲೂಕಿನ ಹೊಸಪಾಳ್ಯದ ಮಂಜುನಾಥ್ ಹಾಗೂ ಧನಲಕ್ಷ್ಮೀ ದಂಪತಿಯ ಹೆಣ್ಣು ಮಗು ಸಾವನ್ನಪ್ಪಿದ್ದು ಇವರು ಕಳೆದ ಹದಿನೈದು ದಿನಗಳಿಂದ ಮಗುವಿಗೆ ಮಣ್ಣಿ ರೂಪದ ಆಹಾರ ತಿನ್ನಿಸುತ್ತಿದ್ದರು.
ಆದರೆ ಇಂದು ಬೆಳಗ್ಗೆ ಸಹ ಆಹಾರ ತಿನ್ನಿಸುವ ವೇಳೆ ಗಂಟಲಲ್ಲಿ ಸಿಲುಕ್ಜಿದ ಪರಿಣಾಮ ಮಗುವಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಆದರೂ ಆಸ್ಪತ್ರೆಗೆ ತಲುಪುವ ಮಾರ್ಗದ ನಡುವೆಯೇ ಮಗು ಪ್ರಾಣ ಬಿಟ್ಟಿದೆ. ಆಸ್ಪತ್ರೆಯಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯರು ಮಗುವಿಗೆ ನೀಡಿದ್ದ ಆಹಾರ ಗಂಟಲಲ್ಲಿ ಸಿಲುಕಿದ ಪರಿಣಾಮವೇ ಸಾವಿಗೀಡಾಗಿರುವುದಾಗಿ ಹೇಳಿದ್ದಾರೆ.
ಮಗುವಿನ ಸಾವಿನ ಕಾರಣ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT